
ವಿಜಯಪುರ: ರಾಜ್ಯದಲ್ಲಿ ಡಬಲ್ ಮರ್ಡರ್ ನಡೆದಿದ್ದು, ಜಿಲ್ಲೆಯ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ (ಅ. 12) ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕೊಲೆಯಾದವರನ್ನು ಸಾಗರ ಬೆಳುಂಡಗಿ (25) ಹಾಗೂ ಇಸಾನ್ ಖುರೇಷಿ (24) ಎಂದು ಗುರುತಿಸಲಾಗಿದೆ.
ಹಳೇ ದ್ವೇಷದ ಶಂಕೆ
ಕೊಲೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ, ಹಳೇ ದ್ವೇಷದ ಕಾರಣದಿಂದಲೇ ಈ ಭೀಕರ ಕೊಲೆ ನಡೆದಿರಬಹುದು ಎಂದು ಪೊಲೀಸರು ಪ್ರಾಥಮಿಕ ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆಗಡುಕರ ಪತ್ತೆಗಾಗಿ ತೀವ್ರ ತನಿಖೆ ಮುಂದುವರಿಸಿದ್ದಾರೆ.



































