ಬಿ.ವೈ.ವಿಜಯೇಂದ್ರರವರ ದಿಲ್ಲಿ ಪ್ರವಾಸ ಮೌನದಲ್ಲಿ ಮುಕ್ತಾಯ

Date:

spot_img

ಬೆಂಗಳೂರು : ವಿಧಾನಸಭೆ ವಿಪಕ್ಷ ನಾಯಕ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ದಿಲ್ಲಿ ಪ್ರವಾಸ ಕೊನೆಗೂ ರಾಜಕೀಯವಾಗಿ ಸ್ಪಷ್ಟತೆ ಇಲ್ಲದೆಯೇ ಮುಕ್ತಾಯಗೊಂಡಿದ್ದು, ಅವರು ಯಾವುದೇ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡದೆ ಮೌನವಾಗಿ ಹಿಂದಿರುಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ವಿಜಯೇಂದ್ರ ಅವರು ದಿಲ್ಲಿಯಲ್ಲಿ ಇದ್ದರೂ ಯಾವುದೇ ಭೇಟಿ ಅಥವಾ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳದೇ ಬುಧವಾರ ರಾತ್ರಿ ಬೆಂಗಳೂರಿಗೆ ಮರಳಿದ್ದಾರೆ. ಇದೇ ವೇಳೆ, ರಾಜ್ಯದ ಹಿರಿಯ ಬಿಜೆಪಿ ನಾಯಕರು — ಆರ್. ಅಶೋಕ್, ಡಾ. ಕೆ. ಸುಧಾಕರ್ ಮತ್ತು ವಿ. ಸೋಮಣ್ಣ ಅವರು ದಿಲ್ಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಭದ್ರತಾ ಹಾಗೂ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ, ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ಬೇಕೆಂಬ ಆಗ್ರಹದೊಂದಿಗೆ, ಈ ನಾಯಕರು ವರಿಷ್ಠರ ದ್ವಾರ ಬಡಿದಿರುವ ಸಾಧ್ಯತೆಯಿದೆ. ಆದರೆ ಕೇಂದ್ರದ ನಾಯಕರಿಂದ ಈ ಬಗ್ಗೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಸಿಗದೆ, ಕುಮಾರಸ್ವಾಮಿ ಅವರು ಹೆಚ್ಚಿನ ಆಸಕ್ತಿ ತೋರಿಸಿಲ್ಲ ಎಂಬ ಮಾಹಿತಿಯು ದಿಲ್ಲಿ ವಲಯದಿಂದ ಹೊರಬಂದಿದೆ.

ಇದರ ನಡುವೆ ಆರ್. ಅಶೋಕ್ ಅವರು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ್ದರೆ, ಸಂಸದ ಗೋವಿಂದ ಕಾರಜೋಳ ಅವರು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ರಾಜ್ಯ ಘಟಕದ ಪ್ರಸ್ತುತ ಸ್ಥಿತಿಗತಿ ಕುರಿತು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಬಿಜೆಪಿ ರಾಷ್ಟ್ರವ್ಯಾಪಿ ನೇತೃತ್ವ ಬದಲಾವಣೆಯ ಚಟುವಟಿಕೆ ಈಗಾಗಲೇ ಪ್ರಾರಂಭವಾಗಿದ್ದು, ಪಕ್ಷದ ಮೂಲಗಳ ಪ್ರಕಾರ ಈ ತಿಂಗಳು ಅಂತ್ಯದೊಳಗೆ ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳಲ್ಲೂ ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆ ಅಂತಿಮಗೊಳ್ಳಲಿದೆ. ಈಗಾಗಲೇ 14 ರಾಜ್ಯಗಳಿಗೆ ಅಧ್ಯಕ್ಷರ ನೇಮಕ ನಡೆದಿದೆ.

ಇದರ ಬೆಳವಣಿಗೆಯೊಂದಿಗೆ, ವಿಜಯೇಂದ್ರರ ಮೌನ ಪ್ರವಾಸ ಹಾಗೂ ಇತರ ನಾಯಕರು ದಿಲ್ಲಿಯಲ್ಲಿ ನಡೆಸಿದ ಚಟುವಟಿಕೆಗಳು ರಾಜ್ಯದ ಬಿಜೆಪಿ ರಾಜಕಾರಣದಲ್ಲಿ ಭಿನ್ನಮತ, ಒಳಜಗಳ ಮತ್ತು ನಾಯಕತ್ವ ಬದಲಾವಣೆಯ ಗಂಭೀರ ಸುಳಿವು ನೀಡಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.