spot_img

‘ಸಮ ಬಾಳು, ಸಮ ಪಾಲು’ಹೇಳುವ ವಿಜಯೇಂದ್ರ ಮೊದಲು ನಾಡಗೀತೆ ಸರಿಯಾಗಿ ಓದಲಿ’ – ಡಿಕೆಶಿ

Date:

ಗದಗ: “ಸಮ ಬಾಳು, ಸಮ ಪಾಲು” ತತ್ವದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೀಡಿದ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. “ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧರು ಕರ್ನಾಟಕದ ಪ್ರಜೆಗಳು. ನಾವು ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದವರ ಬಗ್ಗೆ ಚಿಂತಿಸುತ್ತೇವೆ. ಸಮ ಬಾಳು, ಸಮ ಪಾಲು ಎನ್ನುವವರು ತಮ್ಮ ಪಕ್ಷದಲ್ಲಿ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಕೇಂದ್ರದಲ್ಲಿ ಸಚಿವರು ಮಾಡಿಕೊಳ್ಳಲಿ. ಇಬ್ಬರು ಕ್ರಿಶ್ಚಿಯನ್, ಮೂರು ಜನ ಮುಸ್ಲಿಂ ಮಾಡಿಕೊಳ್ಳಿ ನೋಡೋಣ. ಆಗ ವಿಜಯೇಂದ್ರರವರು ‘ಸಮ ಬಾಳು, ಸಮ ಪಾಲು’ ಬಗ್ಗೆ ಮಾತನಾಡಬಹುದು ಅನಿಸುತ್ತದೆ” ಎಂದು ಡಿಕೆಶಿ ಹೇಳಿದರು.

“ಮೊದಲು ಕುವೆಂಪು ಬರೆದ ನಾಡಗೀತೆ ಸರಿಯಾಗಿ ಓದಲಿ, ‘ಯಾರು ಸೇರಿದ್ರೆ ಶಾಂತಿ ತೋಟ’ ಎಂಬುದನ್ನು ಸರಿಯಾಗಿ ಓದಲಿ. ಈಗ ಅಧ್ಯಕ್ಷರಾಗಿದ್ದಾರೆ, ಅವರ ಲೆವೆಲ್ ನಲ್ಲಿ ಇರಲಿ” ಎಂದೂ ಅವರು ಟೀಕಿಸಿದರು.

ನಮ್ಮ ಎರಡು ವರ್ಷದ ಸಂಭ್ರಮ ಮಾಡಲೇಬೇಕಾಗಿದೆ, ಮಾಡುತ್ತೇವೆ ಎಂದ ಅವರು, “ಪ್ರತಿ ಸಚಿವರು ತಮ್ಮ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆ ಮಾಡಿ ಎಂದು ಸೂಚಿಸಿದ್ದೇವೆ. ಆ ಕೆಲಸ ಮುಗಿದ ಮೇಲೆ ಮುಂದಿನ ಎಲ್ಲಾ ಯೋಜನೆಗಳ ಬಗ್ಗೆ ಚಿಂತನೆ ಮಾಡುತ್ತೇವೆ” ಎಂದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ