‘ಸಮ ಬಾಳು, ಸಮ ಪಾಲು’ಹೇಳುವ ವಿಜಯೇಂದ್ರ ಮೊದಲು ನಾಡಗೀತೆ ಸರಿಯಾಗಿ ಓದಲಿ’ – ಡಿಕೆಶಿ

Date:

spot_img

ಗದಗ: “ಸಮ ಬಾಳು, ಸಮ ಪಾಲು” ತತ್ವದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೀಡಿದ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. “ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧರು ಕರ್ನಾಟಕದ ಪ್ರಜೆಗಳು. ನಾವು ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದವರ ಬಗ್ಗೆ ಚಿಂತಿಸುತ್ತೇವೆ. ಸಮ ಬಾಳು, ಸಮ ಪಾಲು ಎನ್ನುವವರು ತಮ್ಮ ಪಕ್ಷದಲ್ಲಿ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಕೇಂದ್ರದಲ್ಲಿ ಸಚಿವರು ಮಾಡಿಕೊಳ್ಳಲಿ. ಇಬ್ಬರು ಕ್ರಿಶ್ಚಿಯನ್, ಮೂರು ಜನ ಮುಸ್ಲಿಂ ಮಾಡಿಕೊಳ್ಳಿ ನೋಡೋಣ. ಆಗ ವಿಜಯೇಂದ್ರರವರು ‘ಸಮ ಬಾಳು, ಸಮ ಪಾಲು’ ಬಗ್ಗೆ ಮಾತನಾಡಬಹುದು ಅನಿಸುತ್ತದೆ” ಎಂದು ಡಿಕೆಶಿ ಹೇಳಿದರು.

“ಮೊದಲು ಕುವೆಂಪು ಬರೆದ ನಾಡಗೀತೆ ಸರಿಯಾಗಿ ಓದಲಿ, ‘ಯಾರು ಸೇರಿದ್ರೆ ಶಾಂತಿ ತೋಟ’ ಎಂಬುದನ್ನು ಸರಿಯಾಗಿ ಓದಲಿ. ಈಗ ಅಧ್ಯಕ್ಷರಾಗಿದ್ದಾರೆ, ಅವರ ಲೆವೆಲ್ ನಲ್ಲಿ ಇರಲಿ” ಎಂದೂ ಅವರು ಟೀಕಿಸಿದರು.

ನಮ್ಮ ಎರಡು ವರ್ಷದ ಸಂಭ್ರಮ ಮಾಡಲೇಬೇಕಾಗಿದೆ, ಮಾಡುತ್ತೇವೆ ಎಂದ ಅವರು, “ಪ್ರತಿ ಸಚಿವರು ತಮ್ಮ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆ ಮಾಡಿ ಎಂದು ಸೂಚಿಸಿದ್ದೇವೆ. ಆ ಕೆಲಸ ಮುಗಿದ ಮೇಲೆ ಮುಂದಿನ ಎಲ್ಲಾ ಯೋಜನೆಗಳ ಬಗ್ಗೆ ಚಿಂತನೆ ಮಾಡುತ್ತೇವೆ” ಎಂದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ