spot_img

ಭಯದ ವಾತಾವರಣ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ ಗುಣಮುಖ ; ಕೊಲ್ಕತ್ತಾ ರೈಲು ಹತ್ತಿಸಿದ ವಿಶು ಶೆಟ್ಟಿ..

Date:

ಉಡುಪಿ : ಉಡುಪಿಯ ಕಲ್ಪನಾ ಟಾಕೀಸ್ ಬಳಿ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರಿಗೆ ಹಲ್ಲೆ ನಡೆಸಿ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಾಯದಿಂದ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಗುಣಮುಖನಾದ ಆತನನ್ನು ಗುರುವಾರ ಆತನ ಹುಟ್ಟೂರು ಕೋಲ್ಕತ್ತಕ್ಕೆ ರೈಲಿನ ಮೂಲಕ ಕಳುಹಿಸಿಕೊಟ್ಟು ನೈಜ ಮಾನವೀಯತೆ ಮೆರೆದಿದ್ದಾರೆ.
ಈ ಮಾನಸಿಕ ಅಸ್ವಸ್ಥ ಯುವಕ ಕೊಲ್ಕತ್ತದ ಸತೀಂದರ್ ಸಿಂಗ್, ಗುಣಮುಖನಾಗಿ ಆಸ್ಪತ್ರೆ ಸಿಬ್ಬಂದಿಗಳಿಗೆ ತನ್ನ ಕುಟುಂಬದ ವಿಳಾಸವನ್ನು ನೀಡಿ ಊರಿಗೆ ಹೋಗುವ ಇಚ್ಛೆಯನ್ನು ವ್ಯಕ್ತ ಪಡಿಸಿದ್ದಾನೆ. ಆತ ನೀಡಿದ ಮಾಹಿತಿಯನ್ನು ಅನುಸರಿಸಿ ದೂರವಾಣಿ ಕರೆಯ ಮೂಲಕ ಆತನ ಪತ್ನಿಯನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ. ಆದರೆ ಪತ್ನಿಗೆ ಚಿಕ್ಕ ಮಕ್ಕಳಿರುವುದರಿಂದ ಆಕೆ ಉಡುಪಿಗೆ ಬರಲು ಅಸಹಾಯಕತೆ ವ್ಯಕ್ತ ಪಡಿಸಿದ್ದು, ಗಂಡನನ್ನು ರೈಲಿನ ಮೂಲಕ ಕೊಲ್ಕತ್ತಕ್ಕೆ ಕಳುಹಿಸಿಕೊಡುವಂತೆ ಮನವಿ ಮಾಡಿದ್ದಾರೆ. ಅದರಂತೆ ವಿಶು ಶೆಟ್ಟಿ ಅವರು ಸತಿಂದರ್ ಸಿಂಗ್‌ನನ್ನು ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಕರೆದೊಯ್ದು, ಅಲ್ಲಿಂದ ಕೊಲ್ಕತ್ತಕ್ಕೆ ಸಾಗುವ ರೈಲಿನಲ್ಲಿ ಕಳುಹಿಸಿಕೊಟ್ಟಿದ್ದಾರೆ

ಹುಟ್ಟೂರಿಗೆ ತೆರಳುವ ಸಂದರ್ಭದಲ್ಲಿ ಬರಿಗೈಯಲ್ಲಿ ಹೇಗೆ ತೆರಳಲಿ ಎಂದು ದು:ಖಿಸುತ್ತಿದ್ದ ಸತಿಂದರ್ ಸಿಂಗ್‌ಗೆ ರೈಲು ಟಿಕೇಟು ಜೊತೆಗೆ ರೂ.7500/ ನೀಡಿ ವಿಶು ಶೆಟ್ಟಿ ಸಹಕರಿಸಿದ್ದಾರೆ. ಅಲ್ಲದೆ ಆಸ್ಪತ್ರೆಯ ಚಿಕಿತ್ಸೆಯ ವೆಚ್ಚ ರೂ.9600/- ಗಳಾಗಿದ್ದು, ದಾನಿ ಗಿರೀಶ್ ಅವರು ರೂ.7,೦೦೦/- ನೀಡಿದ್ದರೆ, ಉಳಿದ ಮೊತ್ತವನ್ನು ವಿಶು ಶೆಟ್ಟಿ ಅವರೇ ಭರಿಸಿದ್ದಾರೆ. ವಿಶು ಶೆಟ್ಟಿ ಅವರ ಈ ಮಾನವೀಯ ಕಳಕಳಿಗೆ ಅಪಾರ ಪ್ರಶಂಸೆ ವ್ಯಕ್ತವಾಗಿದೆ.
ಈ ಸೇವಾ ಕಾರ್ಯದಲ್ಲಿ ಸಾಮಾಜಿಕ ಕಾರ್ಯಕರ್ತ ಹರೀಶ್ ಉದ್ಯಾವರ ನೆರವಾದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.