
ಕಾರ್ಕಳ : ಮೈಟ್ ಇಂಜಿನಿಯರಿಂಗ್ ಕಾಲೇಜು ಇಲ್ಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ವಿಜೇತ ವಿಶೇಷ ಶಾಲೆಗೆ ಭೇಟಿ ನೀಡಿ ಶಾಲಾ ಚಟುವಟಿಕೆಗಳನ್ನು ವೀಕ್ಷಿಸಿದರು ಹಾಗೂ ಮಕ್ಕಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಸೀನಿಯರ್ ಅಸಿಸ್ಟೆಂಟ್ ಪ್ರೊಫೆಸರ್ ಭವ್ಯ, ಅಸಿಸ್ಟೆಂಟ್ ಪ್ರೊಫೆಸರ್ ಡಾ.ಅಮೃತಾ, ಅಸಿಸ್ಟೆಂಟ್ ಪ್ರೊಫೆಸರ್ ಶಂಕರ್ ಶೆಣೈ ಉಪಸ್ಥಿತರಿದ್ದರು.

ಶ್ರೀ ಸುಭಾಸ್ ಚಂದ್ರ ಶೆಟ್ಟಿ ಕೂರಾಡಿ ಹಾಗೂ ದೀಪಾ ಸುಭಾಸ್ ಚಂದ್ರ ಶೆಟ್ಟಿ ದಂಪತಿಗಳು ಶಾಲೆಗೆ ಆಗಮಿಸಿ ದಿ.ಕೊರ್ಗಿ ಶೇಖರ್ ಶೆಟ್ಟಿ ಇವರ 3 ನೇ ವರ್ಷದ ಪುಣ್ಯ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಿ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು.

ಸುಮಾರು 130 ಕ್ಕಿಂತ ಹೆಚ್ಚಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳನ್ನು ಮನರಂಜಿಸಿದರು. ಹರ್ಷಿತಾ ಕಿರಣ್ ಕಾರ್ಯಕ್ರಮ ನಿರೂಪಿಸಿ , ಡಾ ಕಾಂತಿ ಹರೀಶ್ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳನ್ನಾಡಿದರು.



































