spot_img

ವಿಟ್ಲ: ಫೋಟೋ-ವೀಡಿಯೋ ಲೀಕ್ ಬೆದರಿಕೆ; ಸೌದಿ ಉದ್ಯೋಗಿಗೆ ₹44.80 ಲಕ್ಷ ವಂಚನೆ

Date:

spot_img
spot_img
FIR

ವಿಟ್ಲ: ಕೇರಳ ಮೂಲದವರಾಗಿದ್ದು ಸೌದಿ ಅರೇಬಿಯಾದಲ್ಲಿ ಉದ್ಯೋಗ ನಿರ್ವಹಿಸುತ್ತಿರುವ 53 ವರ್ಷದ ಮಹಮ್ಮದ್ ಅಶ್ರಫ್ ತಾವರಕಡನ್ ಎಂಬವರು, ಮದುವೆಯ ಉದ್ದೇಶದಿಂದ 2024ರ ಸೆಪ್ಟೆಂಬರ್‌ನಲ್ಲಿ ಮಂಗಳೂರಿಗೆ ಆಗಮಿಸಿದ್ದರು. ಆದರೆ, ಮದುವೆಯ ನೆಪದಲ್ಲಿ ಅವರನ್ನು ಕರೆಸಿಕೊಂಡ ಆರೋಪಿಗಳ ಗುಂಪು ಫೋಟೊ ಮತ್ತು ವಿಡಿಯೋಗಳನ್ನು ಲೀಕ್ ಮಾಡುವ ಬೆದರಿಕೆ ಹಾಕಿ ಬರೋಬ್ಬರಿ ₹44.80 ಲಕ್ಷ ವಂಚಿಸಿದೆ.

ವಂಚನೆ ಮತ್ತು ಬೆದರಿಕೆ ಕೃತ್ಯ

ಮಹಮ್ಮದ್ ಅಶ್ರಫ್ ಅವರನ್ನು ಮಂಗಳೂರಿಗೆ ಕರೆಸಿದ ನಂತರ ಬಶೀರ್, ಸಫಿಯಾ ಮತ್ತು ಇತರ ಆರೋಪಿಗಳು, ಹೆಣ್ಣು ನೋಡುವ ನೆಪದಲ್ಲಿ ಅವರ ಫೋಟೋಗಳು ಮತ್ತು ವೀಡಿಯೋಗಳನ್ನು ತೆಗೆದುಕೊಂಡಿದ್ದಾರೆ. ನಂತರ ಈ ವೀಡಿಯೋಗಳನ್ನು ಸಾರ್ವಜನಿಕವಾಗಿ ಲೀಕ್ ಮಾಡುವುದಾಗಿ ಬೆದರಿಸಿ ಹಂತ ಹಂತವಾಗಿ ದೊಡ್ಡ ಮೊತ್ತದ ಹಣವನ್ನು ಸುಲಿಗೆ ಮಾಡಿದ್ದಾರೆ.

ಈ ಕುರಿತು ಸಂತ್ರಸ್ತ ಮಹಮ್ಮದ್ ಅಶ್ರಫ್ ತಾವರಕಡನ್ ಅವರು ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ, ಬಶೀರ್, ಸಫಿಯಾ ಹಾಗೂ ಇತರರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರ: 145/2025, ಕಲಂ: 318(4), 308(2), 115(2), 351(2) ರ/ವಿ 3(5) BNS-2023 ಅನ್ವಯ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಈ ವಾರ ಬಿಡುಗಡೆಗೆ ಸಿದ್ಧವಾಗಿವೆ 3 ನೂತನ ಆಪಲ್ ಉತ್ಪನ್ನಗಳು; ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ಬಹುನಿರೀಕ್ಷಿತ ನೂತನ ಆಪಲ್ ಸಾಧನಗಳಿಗಾಗಿ ಹೆಚ್ಚು ಸಮಯ ಕಾಯಬೇಕಾಗಿಲ್ಲ. ಆಪಲ್ ಕಂಪನಿಯು ಈ ವಾರ ತನ್ನ 3 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟೆ ಇನ್ನಿಲ್ಲ

ಉತ್ತರ ಕರ್ನಾಟಕದ ಖ್ಯಾತ ರಂಗಭೂಮಿ ಕಲಾವಿದ ಮತ್ತು ಚಲನಚಿತ್ರ ಹಾಸ್ಯನಟ, ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ (61) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಆರ್.ಎಸ್.ಎಸ್. ಹೆಸರನ್ನು ಜಪಿಸುತ್ತಿರುವ ಪ್ರಿಯಾಂಕ್ ಖರ್ಗೆ ವರ್ತನೆ ಹಾಸ್ಯಾಸ್ಪದ: ಕುತ್ಯಾರು ನವೀನ್ ಶೆಟ್ಟಿ

ವಿಶ್ವದ ಅತಿ ದೊಡ್ಡ ಸೇವಾ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಸರನ್ನು ಪದೇ ಪದೇ ಜಪಿಸುತ್ತಾ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಪ್ರಿಯಾಂಕ ಖರ್ಗೆ ವರ್ತನೆ ಹಾಸ್ಯಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ದಿನ ವಿಶೇಷ –ವಿಶ್ವ ಮಾನದಂಡಗಳ ದಿನ

ವಿಶ್ವ ಮಾನದಂಡಗಳ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 14 ರಂದು ಆಚರಿಸಲಾಗುತ್ತದೆ.