spot_img

ಬೆಂಗಳೂರಿನ 35 ಕಡೆ ಯುದ್ಧ ಸೈರನ್! ಉಗ್ರ ದಾಳಿ ತಡೆಯ ಮಾಕ್ ಡ್ರಿಲ್‌ಗೆ ಭದ್ರತಾ ವ್ಯವಸ್ಥೆಯ ಕಸರತ್ತು

Date:

spot_img

ಬೆಂಗಳೂರು: ಪಾಕಿಸ್ತಾನದ ಉಗ್ರರ ಶಿಬಿರಗಳ ಮೇಲೆ ಭಾರತೀಯ ಸೇನೆ ನಡೆಸಿದ ಕ್ಷಿಪಣಿ ದಾಳಿಯ ಬೆನ್ನಲ್ಲೆ , ದೇಶಾದ್ಯಂತ ಭದ್ರತಾ ಎಚ್ಚರಿಕೆಯನ್ನು ಹೆಚ್ಚಿಸಲಾಗಿದೆ. ಇದರ ಅಂಗವಾಗಿ ‘ಆಪರೇಷನ್ ಅಭ್ಯಾಸ್ ’ ಹೆಸರಿನಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಮಾಕ್ ಡ್ರಿಲ್‌ (Mock Drill) ನಡೆಯಿತು. ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಇದೇ ಸಂದರ್ಭದಲ್ಲಿ ಯುದ್ಧ ಸೈರನ್‌ಗಳ ಮೂಲಕ ಸಾರ್ವಜನಿಕ ಎಚ್ಚರಿಕೆ ಅಭ್ಯಾಸ ನಡೆಸಲಾಯಿತು.

ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನ 3:58 ರಿಂದ ಸಂಜೆ 4 ಗಂಟೆಯವರೆಗೆ ಎರಡು ನಿಮಿಷಗಳ ಕಾಲ ಯುದ್ಧ ಸೈರನ್‌ ಮೊಳಗಿಸಲಾಯಿತು. ಸುಮಾರು 35 ಪ್ರಮುಖ ಪ್ರದೇಶಗಳಲ್ಲಿ ಈ ಸೈರನ್‌ಗಳು ಧ್ವನಿಸಿದವು. ವೈಯಾಲಿಕಾವಲ್, ಉಪ್ಪಾರಪೇಟೆ ಪೊಲೀಸ್ ಠಾಣೆ, ಕಮರ್ಷಿಯಲ್ ಸ್ಟ್ರೀಟ್, ರಾಜಾಜಿನಗರ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಕೆರೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಅಗ್ನಿಶಾಮಕ ಠಾಣೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಈ ಅಭ್ಯಾಸ ನಡೆಯಿತು.

ಭದ್ರತಾ ತಂತ್ರಜ್ಞಾನದ ಸುಧಾರಣೆ ಹಾಗೂ ಅಗಾತ ಪರಿಸ್ಥಿತಿಯಲ್ಲಿ ಸಾರ್ವಜನಿಕರ ತಕ್ಷಣದ ಪ್ರತಿಕ್ರಿಯೆ ಪರೀಕ್ಷಿಸುವ ಉದ್ದೇಶದಿಂದ ಈ ಅಭ್ಯಾಸ ನಡೆಸಲಾಗಿದೆ. ಯಾವುದೇ ಆತಂಕಕ್ಕಿಂತಲೂ ಈ ಅಭ್ಯಾಸವು ಪೂರ್ವ ಸಿದ್ಧತೆಯ ಭಾಗವಾಗಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಸಾದ್ ಯೋಜನೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಸೇರಿಸಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಸದ ರಾಘವೇಂದ್ರ ಮನವಿ

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳು ಮತ್ತು ಮಾಧ್ಯಮದವರ ಮೇಲೆ ಹಲ್ಲೆ,ಲಘು ಲಾಠಿ ಪ್ರಹಾರ; ಎಸ್ಪಿ ಅರುಣ್ ಕುಮಾರ್ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ಅನಾಮಿಕ ದೂರಿನ ಮೇರೆಗೆ ಶವಗಳ ಶೋಧ ನಡೆಸುತ್ತಿದ್ದ ಎಸ್ಐಟಿ ತಂಡ ಕಾರ್ಯಾಚರಣೆ ಮುಗಿಸಿ ಹಿಂದಿರುಗಿದ ಬಳಿಕ, ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು.

ಶಿವಮೊಗ್ಗ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್: ಎರ್ಲಪಾಡಿ ಶಾಲೆಯ ಪ್ರಥ್ವಿಗೆ ಚಿನ್ನದ ಪದಕ!

ಶಿವಮೊಗ್ಗದ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ಆಗಸ್ಟ್ 3ರಂದು ನಡೆದ 3ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಎರ್ಲಪಾಡಿ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಪ್ರಥ್ವಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

ಬಂಟರ ಸೇವಾ ಸಂಘ (ರಿ) ಕುಕ್ಕುಂದೂರು ಗ್ರಾಮ ಕಾರ್ಕಳ ತಾಲೂಕು ಇವರ ನೇತೃತ್ವದಲ್ಲಿ ದಿನಾಂಕ 08.08.2025 ರಂದು ನಡೆಯಲಿರುವ 10 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ

ಬಂಟರ ಸೇವಾ ಸಂಘ (ರಿ), ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ 10ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ದಿನಾಂಕ 08-08-2025 ಶುಕ್ರವಾರದಂದು ಶ್ರೀ ದೇವಿ ಕೃಪಾ ಸಭಾಭವನದಲ್ಲಿ ವೈಭವದಿಂದ ನಡೆಯಲಿದೆ.