spot_img

“ನಮ್ಮ ಬಳಿ ಹಣವಿಲ್ಲ, ಕೇಂದ್ರವನ್ನು ಕೇಳಿ”: ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆ ವೈರಲ್

Date:

ಬಾದಾಮಿ : “ನಮ್ಮ ಬಳಿ ಹಣವಿಲ್ಲ, ಸಿದ್ದರಾಮಯ್ಯನವರಲ್ಲೂ ದುಡ್ಡಿಲ್ಲ” ಎಂಬ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.

ಬಾದಾಮಿಯಲ್ಲಿ ಹೊಸ ಅಗ್ನಿಶಾಮಕ ಠಾಣೆ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸಿದ ನಂತರ ವೇದಿಕೆಯಲ್ಲಿ ಮಾತನಾಡಿದ ಅವರು, “ನಾವು ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಮದ್ಯ ಎಲ್ಲವನ್ನೂ ಜನರಿಗೆ ಕೊಟ್ಟುಬಿಟ್ಟಿದ್ದೇವೆ. ಈಗ ಬಾದಾಮಿ ಅಭಿವೃದ್ಧಿಗೆ ಹಣ ಇಲ್ಲ. ಕೇಂದ್ರ ಸರ್ಕಾರ 1 ಸಾವಿರ ಕೋಟಿ ರೂಪಾಯಿ ನೀಡಬೇಕು. ಕೇಂದ್ರದಿಂದ ಹಣ ಬಂದರೆ ನಾವು ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಬಹುದು” ಎಂದು ಹೇಳಿದರು.

ವೈರಲ್ ಆದ ತಮಾಷೆಯ ಉಚ್ಛಾರಣೆ:
ಅವರ ಈ ಭಾಷಣದ ಸಮಯದಲ್ಲಿ ಸ್ಥಳೀಯ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರನ್ನು ಉದ್ದೇಶಿಸಿ, “ಸಾವಿರ ಕೋಟಿ ಕೇಳ್ಬೇಕಪ್ಪಾ, ಹೆದರಬೇಡ… ಭೀಮಸೇನನಿಗೆ ಏನಾಯ್ತಪ್ಪಾ? ಸಾವಿರ ಕೋಟಿ ಕೇಳೋಕೆ ಗಾಬರಿಯಾಗ್ತಿಯಾ?” ಎಂದು ತಮಾಷೆಯ ಭಾಷೆಯಲ್ಲಿ ಮಾತಾಡಿದ ದೃಶ್ಯವೂ ವೀಡಿಯೋದಲ್ಲಿ ದಾಖಲಾಗಿದ್ದು, ಅದು ವೈರಲ್ ಆಗಿದೆ.

ಸ್ವತಃ ಸಚಿವರಿಂದ ಸ್ಪಷ್ಟನೆ:
ಸುದ್ದಿಯ ಮೇಲೆ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, “ನಾನು ಯಾವತ್ತೂ ಸರ್ಕಾರದ ಬಳಿ ಹಣ ಇಲ್ಲ ಎಂದೇನೂ ಹೇಳಿಲ್ಲ. ಭಾಷಣದ ವೇಳೆ ಯಾರೋ ತಮಾಷೆಗೆ ಏನೋ ಹೇಳಿದರು, ಅದಕ್ಕೆ ನಾನೂ ತಮಾಷೆಯೇ ಪ್ರತಿಕ್ರಿಯೆ ನೀಡಿದ್ದೆ. ಸರ್ಕಾರದ ಬಳಿ ಸಾಕಷ್ಟು ಅನುದಾನವಿದೆ. ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ರಾಜಕೀಯ ಪ್ರತಿಕ್ರಿಯೆಗಳು:
ಈ ಹೇಳಿಕೆಯಿಂದ ಬಿಜೆಪಿ ಸೇರಿದಂತೆ ಪ್ರತಿ ಪಕ್ಷಗಳು ಕಾಂಗ್ರೆಸ್ ಸರ್ಕಾರದ ಹಣಕಾಸು ನಿಲುವಿನ ಕುರಿತು ಪ್ರಶ್ನೆ ಎಬ್ಬಿಸಿವೆ. ಸಚಿವರ ಹೇಳಿಕೆ, ಮಹತ್ವದ ಯೋಜನೆಗಳಿಗೂ ಹಣ ಇಲ್ಲದ ಸ್ಥಿತಿಗೆ ತಲುಪಿರುವುದನ್ನು ತೋರಿಸುತ್ತಿದೆಯಾ ಎಂಬ ಚರ್ಚೆಗಳು ಸಕ್ರಿಯವಾಗಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.