“ನಮ್ಮ ಬಳಿ ಹಣವಿಲ್ಲ, ಕೇಂದ್ರವನ್ನು ಕೇಳಿ”: ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆ ವೈರಲ್

Date:

spot_img

ಬಾದಾಮಿ : “ನಮ್ಮ ಬಳಿ ಹಣವಿಲ್ಲ, ಸಿದ್ದರಾಮಯ್ಯನವರಲ್ಲೂ ದುಡ್ಡಿಲ್ಲ” ಎಂಬ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.

ಬಾದಾಮಿಯಲ್ಲಿ ಹೊಸ ಅಗ್ನಿಶಾಮಕ ಠಾಣೆ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸಿದ ನಂತರ ವೇದಿಕೆಯಲ್ಲಿ ಮಾತನಾಡಿದ ಅವರು, “ನಾವು ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಮದ್ಯ ಎಲ್ಲವನ್ನೂ ಜನರಿಗೆ ಕೊಟ್ಟುಬಿಟ್ಟಿದ್ದೇವೆ. ಈಗ ಬಾದಾಮಿ ಅಭಿವೃದ್ಧಿಗೆ ಹಣ ಇಲ್ಲ. ಕೇಂದ್ರ ಸರ್ಕಾರ 1 ಸಾವಿರ ಕೋಟಿ ರೂಪಾಯಿ ನೀಡಬೇಕು. ಕೇಂದ್ರದಿಂದ ಹಣ ಬಂದರೆ ನಾವು ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಬಹುದು” ಎಂದು ಹೇಳಿದರು.

ವೈರಲ್ ಆದ ತಮಾಷೆಯ ಉಚ್ಛಾರಣೆ:
ಅವರ ಈ ಭಾಷಣದ ಸಮಯದಲ್ಲಿ ಸ್ಥಳೀಯ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರನ್ನು ಉದ್ದೇಶಿಸಿ, “ಸಾವಿರ ಕೋಟಿ ಕೇಳ್ಬೇಕಪ್ಪಾ, ಹೆದರಬೇಡ… ಭೀಮಸೇನನಿಗೆ ಏನಾಯ್ತಪ್ಪಾ? ಸಾವಿರ ಕೋಟಿ ಕೇಳೋಕೆ ಗಾಬರಿಯಾಗ್ತಿಯಾ?” ಎಂದು ತಮಾಷೆಯ ಭಾಷೆಯಲ್ಲಿ ಮಾತಾಡಿದ ದೃಶ್ಯವೂ ವೀಡಿಯೋದಲ್ಲಿ ದಾಖಲಾಗಿದ್ದು, ಅದು ವೈರಲ್ ಆಗಿದೆ.

ಸ್ವತಃ ಸಚಿವರಿಂದ ಸ್ಪಷ್ಟನೆ:
ಸುದ್ದಿಯ ಮೇಲೆ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, “ನಾನು ಯಾವತ್ತೂ ಸರ್ಕಾರದ ಬಳಿ ಹಣ ಇಲ್ಲ ಎಂದೇನೂ ಹೇಳಿಲ್ಲ. ಭಾಷಣದ ವೇಳೆ ಯಾರೋ ತಮಾಷೆಗೆ ಏನೋ ಹೇಳಿದರು, ಅದಕ್ಕೆ ನಾನೂ ತಮಾಷೆಯೇ ಪ್ರತಿಕ್ರಿಯೆ ನೀಡಿದ್ದೆ. ಸರ್ಕಾರದ ಬಳಿ ಸಾಕಷ್ಟು ಅನುದಾನವಿದೆ. ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ರಾಜಕೀಯ ಪ್ರತಿಕ್ರಿಯೆಗಳು:
ಈ ಹೇಳಿಕೆಯಿಂದ ಬಿಜೆಪಿ ಸೇರಿದಂತೆ ಪ್ರತಿ ಪಕ್ಷಗಳು ಕಾಂಗ್ರೆಸ್ ಸರ್ಕಾರದ ಹಣಕಾಸು ನಿಲುವಿನ ಕುರಿತು ಪ್ರಶ್ನೆ ಎಬ್ಬಿಸಿವೆ. ಸಚಿವರ ಹೇಳಿಕೆ, ಮಹತ್ವದ ಯೋಜನೆಗಳಿಗೂ ಹಣ ಇಲ್ಲದ ಸ್ಥಿತಿಗೆ ತಲುಪಿರುವುದನ್ನು ತೋರಿಸುತ್ತಿದೆಯಾ ಎಂಬ ಚರ್ಚೆಗಳು ಸಕ್ರಿಯವಾಗಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.