spot_img

ಬೈಲೂರು ಪರಶುರಾಮ ಥೀಮ್ ಪಾರ್ಕ್ ಸ್ಥಗಿತಗೊಂಡ ಕಾಮಗಾರಿ ಯಾವಾಗ ? : ಸುಮಿತ್ ಶೆಟ್ಟಿ ಕೌಡೂರು

Date:

spot_img

ಕಾರ್ಕಳ: ಬೈಲೂರಿನ ಉಮಿಕ್ಕಲ್ ಬೆಟ್ಟದ ಮೇಲೆ ನಿರ್ಮಾಣವಾಗುತ್ತಿದ್ದ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್‌ನ ಕಾಮಗಾರಿಯು ಸ್ಥಗಿತಗೊಂಡಿರುವ ಕುರಿತು ಜಿ.ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮತ್ತು ಅವರ ತಂಡವು ಸುಳ್ಳು ಸುದ್ದಿ ಮತ್ತು ಅಪಪ್ರಚಾರದ ಮೂಲಕ ಈ ಯೋಜನೆಯನ್ನು ವಿವಾದಕ್ಕೀಡುಮಾಡಿ, ಕಾಮಗಾರಿಯನ್ನು ಹಾಳುಗೆಡವಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಕಾಂಗ್ರೆಸ್‌ನ ಆರೋಪಗಳು ಸುಳ್ಳೆಂದು ಈಗ ಸಾಬೀತಾಗಿವೆ. ಪ್ರವಾಸೋದ್ಯಮ ದೃಷ್ಟಿಯಿಂದ ಮಹತ್ವದ ಈ ಯೋಜನೆಯ ಕಾಮಗಾರಿಯನ್ನು ಯಾವಾಗ ಪುನರಾರಂಭಿಸುತ್ತೀರಿ?” ಎಂದು ಸುಮಿತ್ ಶೆಟ್ಟಿ ಪ್ರಶ್ನಿಸಿದ್ದಾರೆ. “ನಮ್ಮದೇ ಸರ್ಕಾರ ಇದೆ ಎಂಬ ಕಾರಣಕ್ಕೆ ಹಣ ಬಿಡುಗಡೆ ಮಾಡದೆ, ಉತ್ತಮ ದೂರದೃಷ್ಟಿಯ ಯೋಜನೆಯ ಕಾಮಗಾರಿ ಮುಂದುವರೆಯಲು ಕಾಂಗ್ರೆಸ್ ಅಡ್ಡಿಪಡಿಸಿದೆ. ಖಾಸಗಿ ದೂರಿನ ಆಧಾರದ ಮೇಲೆ ಸರ್ಕಾರಿ ಕಾಮಗಾರಿಯನ್ನು ನಿಲ್ಲಿಸಿದ ಕೀರ್ತಿ ಉದಯ ಶೆಟ್ಟಿ ಮತ್ತು ತಂಡಕ್ಕೆ ಸಲ್ಲುತ್ತದೆ” ಎಂದು ಅವರು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್‌ಗೆ ಥೀಮ್ ಪಾರ್ಕ್ ಬೇಡವಾದರೂ, ಬೈಲೂರು ಮತ್ತು ಕ್ಷೇತ್ರದ ಜನತೆಗೆ ಇದು ಬೇಕಾಗಿದೆ. ಪ್ರತಿಮೆ ಫೈಬರ್ ಎಂದು ಅಪಪ್ರಚಾರ ನಡೆಸಿ, ಕಾರ್ಕಳದ ಮಾನವನ್ನು ವಿಶ್ವಮಟ್ಟದಲ್ಲಿ ಹರಾಜು ಹಾಕಿದ ಕಾಂಗ್ರೆಸ್ಸಿಗರು, ಅದು ಫೈಬರ್ ಅಲ್ಲ ಎಂದು ಸಾಬೀತಾದ ಮೇಲೆ ಕ್ಷಮೆ ಕೇಳಬೇಕಿತ್ತು” ಎಂದು ಸುಮಿತ್ ಶೆಟ್ಟಿ ಆಗ್ರಹಿಸಿದ್ದಾರೆ. ಸರ್ಕಾರ ಅಧಿಕಾರವನ್ನು ಸ್ವಾರ್ಥ ಸಾಧನೆಗೆ ಬಳಸಿಕೊಂಡಿದೆ ಎಂದು ಆರೋಪಿಸಿದ ಅವರು, “ಕಾಮಗಾರಿಯು ಮೂಲ ಒಪ್ಪಂದದಂತೆ ನಡೆದಿದೆಯೇ ಎಂದು ಖಚಿತಪಡಿಸಿಕೊಳ್ಳದೆ, ಇಲಾಖೆಗೆ ಹಸ್ತಾಂತರವಾಗುವ ಮೊದಲೇ ಕಾಂಗ್ರೆಸ್ಸಿಗರು ವಿವಾದ ಸೃಷ್ಟಿಸಿದ್ದರು. ಇದೀಗ ಅವರ ಅಪಪ್ರಚಾರ ಸುಳ್ಳೆಂದು ಸಾಬೀತಾಗಿದೆ. ತನಿಖೆ ಮುಂದುವರಿಯಲಿ, ನಮಗೇನು ಆಕ್ಷೇಪವಿಲ್ಲ. ಆದರೆ, ಕಾಮಗಾರಿ ಯಾವಾಗ ಆರಂಭವಾಗುತ್ತದೆ ಮತ್ತು ಪಾರ್ಕ್ ಅನ್ನು ಯಾವಾಗ ಸಾರ್ವಜನಿಕ ವೀಕ್ಷಣೆಗೆ ಬಿಟ್ಟುಕೊಡುತ್ತೀರಿ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಶ್ರೀ ಪುತ್ತಿಗೆ ಮಠದ ಕೆಮುಂಡೆಲು ಶಾಲೆಗೆ ರೋಟರಿ ಸಹಯೋಗದಲ್ಲಿ ಕಲಿಕಾ ಸಾಮಗ್ರಿ ವಿತರಣೆ, ಶಿಕ್ಷಕರಿಗೆ ಸನ್ಮಾನ!

ಶ್ರೀ ಪುತ್ತಿಗೆ ಮಠದ ಕೆಮುಂಡೆಲು ಶಾಲೆಯಲ್ಲಿ 2025ರ ರೋಟರಿ ಸಹಯೋಗದಲ್ಲಿ 'ರವಿ ಸಂತು ಬಳಗ ಬೆಂಗಳೂರು' ವತಿಯಿಂದ ಮಹತ್ವದ ಕಾರ್ಯಕ್ರಮ ನಡೆಯಿತು.

‘ಶರಬತ್ ಹಣ್ಣು’ ಪ್ಯಾಶನ್ ಫ್ರೂಟ್: ಆರೋಗ್ಯಕ್ಕೆ ವರದಾನ ಈ ಅದ್ಭುತ ಹಣ್ಣು!

ನಮ್ಮ ಪರಿಸರದಲ್ಲಿ ಅನೇಕ ಬಗೆಯ ಹಣ್ಣುಗಳಿದ್ದರೂ, ಅವುಗಳ ಉಪಯೋಗಗಳ ಬಗ್ಗೆ ನಮಗೆ ಹೆಚ್ಚಾಗಿ ತಿಳಿದಿಲ್ಲ. ಅಂತಹ ನಿಸರ್ಗದತ್ತ ಹಣ್ಣುಗಳಲ್ಲಿ ಪ್ಯಾಶನ್ ಫ್ರೂಟ್ ಕೂಡ ಒಂದು.