spot_img

“ವಿದ್ಯುತ್ ಉಚಿತವಾಗಿ ಕೊಡಿ ಎಂದವರು ಯಾರು?” : ಸ್ಮಾರ್ಟ್ ಮೀಟರ್ ಕಡ್ಡಾಯದ ವಿರುದ್ಧ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

Date:

spot_img

ಬೆಂಗಳೂರು: ಹೊಸ ಮನೆಗಳಿಗೆ ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ. ಸ್ಮಾರ್ಟ್ ಮೀಟರ್ ಮತ್ತು ಸಾಮಾನ್ಯ ಮೀಟರ್‌ಗಳ ದರ ನಿಗದಿ, ಹೆಚ್ಚುವರಿ ಶುಲ್ಕ ಹಾಗೂ ಗ್ಯಾರಂಟಿ ಸಮಸ್ಯೆಗಳ ಬಗ್ಗೆ ಕಠಿಣ ನಿಲುವು ತಳೆದ ನ್ಯಾಯಾಲಯ, “ವಿದ್ಯುತ್ ಉಚಿತವಾಗಿ ಕೊಡಿ ಎಂದವರು ಯಾರು?” ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೊಡ್ಡಬಳ್ಳಾಪುರದ ನಿವಾಸಿ ಜಯಲಕ್ಷ್ಮೀ ತಮ್ಮ ಹೊಸ ಮನೆಗೆ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳುವಂತೆ ಬೆಸ್ಕಾಂ ಉಪ ವಿಭಾಗದ ಎಇಇ ನೀಡಿದ ನೋಟಿಸ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿರುವ ಏಕಸದಸ್ಯ ಪೀಠ, ಸ್ಮಾರ್ಟ್ ಮೀಟರ್ ಕಡ್ಡಾಯ, ಹೆಚ್ಚುವರಿ ಶುಲ್ಕ ಹಾಗೂ ಸಾರ್ವಜನಿಕರ ಮೇಲೆ ತೋರುವ ಆರ್ಥಿಕ ಬಾಧೆ ಕುರಿತು ತೀವ್ರವಾಗಿ ಪ್ರಶ್ನಿಸಿತು.

“ಇದು ಉಚಿತ ಗ್ಯಾರಂಟಿಗಳ ಪರಿಣಾಮವೇ? ಜನರನ್ನು ಹಣ ಕೊಟ್ಟು ಮೀಟರ್ ಹಾಕಿಸಿಕೊಳ್ಳುವಂತಾಗಿಸುವುದು ನ್ಯಾಯವೇ? ಬಡವರು ಏನು ಮಾಡಬೇಕು?” ಎಂದು ನ್ಯಾಯಮೂರ್ತಿ ಪ್ರಶ್ನಿಸಿದರು. ನ್ಯಾಯಾಲಯ ತಾತ್ಕಾಲಿಕವಾಗಿ ನೋಟಿಸ್‌ಗೆ ತಡೆ ನೀಡಿದ್ದು, ರಾಜ್ಯ ಸರಕಾರ ಹಾಗೂ ಬೆಸ್ಕಾಂಗೆ ನೋಟಿಸ್ ಜಾರಿ ಮಾಡಲಾಗಿದೆ. ಮುಂದಿನ ವಿಚಾರಣೆ ಜೂನ್ 4ಕ್ಕೆ ಮುಂದೂಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಸರ್ವ್ ಬ್ಯಾಂಕ್ ನಾಣ್ಯ ಸಾಗಾಟ ಲಾರಿ ಪಲ್ಟಿ: ನೆಲಮಂಗಲ ಬಳಿ ₹57 ಲಕ್ಷ ನಾಣ್ಯಗಳು ಸುರಕ್ಷಿತ!

ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ (RBI) ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳನ್ನು ರಾಯಚೂರಿಗೆ ಸಾಗಿಸುತ್ತಿದ್ದ ಲಾರಿಯೊಂದು ನೆಲಮಂಗಲ ತಾಲೂಕಿನ ರಾಯರಪಾಳ್ಯ ಗೇಟ್ ಬಳಿ ಹಳ್ಳಕ್ಕೆ ಉರುಳಿ ಬಿದ್ದಿದೆ.

ಧರ್ಮಸ್ಥಳ ಪ್ರಕರಣ: ತಿಮರೋಡಿ, ಸಮೀರ್, ಮಟ್ಟಣ್ಣನವರ್ ರವರ ತನಿಖೆಗೆ ಸ್ನೇಹಮಯಿ ಕೃಷ್ಣ ಆಗ್ರಹ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದಿದ್ದಾರೆ.

ನೆಲದ ಮೇಲೆ ಕುಳಿತು ಊಟ ಮಾಡುವುದರ ಅದ್ಭುತ ಪ್ರಯೋಜನಗಳು

ಇತ್ತೀಚಿನ ಜೀವನಶೈಲಿ ಬದಲಾವಣೆಗಳ ನಡುವೆ, ಹಿಂದಿನ ಉತ್ತಮ ಅಭ್ಯಾಸಗಳು ಮರೆಯಾಗುತ್ತಿವೆ. ಕೆಲ ವರ್ಷಗಳ ಹಿಂದೆ ಕುಟುಂಬದವರೆಲ್ಲಾ ಒಟ್ಟಿಗೆ ನೆಲದ ಮೇಲೆ ಕುಳಿತು ಊಟ ಮಾಡುತ್ತಿದ್ದ ದೃಶ್ಯ ಈಗ ವಿರಳ.

ಕೆಜಿಎಫ್ ಬಾಬು ಮನೆಗೆ R.T.O ದಾಳಿ: ಐಷಾರಾಮಿ ಕಾರುಗಳ ತೆರಿಗೆ ಪರಿಶೀಲನೆ!

ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ