spot_img

“ವಿದ್ಯುತ್ ಉಚಿತವಾಗಿ ಕೊಡಿ ಎಂದವರು ಯಾರು?” : ಸ್ಮಾರ್ಟ್ ಮೀಟರ್ ಕಡ್ಡಾಯದ ವಿರುದ್ಧ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

Date:

ಬೆಂಗಳೂರು: ಹೊಸ ಮನೆಗಳಿಗೆ ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ. ಸ್ಮಾರ್ಟ್ ಮೀಟರ್ ಮತ್ತು ಸಾಮಾನ್ಯ ಮೀಟರ್‌ಗಳ ದರ ನಿಗದಿ, ಹೆಚ್ಚುವರಿ ಶುಲ್ಕ ಹಾಗೂ ಗ್ಯಾರಂಟಿ ಸಮಸ್ಯೆಗಳ ಬಗ್ಗೆ ಕಠಿಣ ನಿಲುವು ತಳೆದ ನ್ಯಾಯಾಲಯ, “ವಿದ್ಯುತ್ ಉಚಿತವಾಗಿ ಕೊಡಿ ಎಂದವರು ಯಾರು?” ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೊಡ್ಡಬಳ್ಳಾಪುರದ ನಿವಾಸಿ ಜಯಲಕ್ಷ್ಮೀ ತಮ್ಮ ಹೊಸ ಮನೆಗೆ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳುವಂತೆ ಬೆಸ್ಕಾಂ ಉಪ ವಿಭಾಗದ ಎಇಇ ನೀಡಿದ ನೋಟಿಸ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿರುವ ಏಕಸದಸ್ಯ ಪೀಠ, ಸ್ಮಾರ್ಟ್ ಮೀಟರ್ ಕಡ್ಡಾಯ, ಹೆಚ್ಚುವರಿ ಶುಲ್ಕ ಹಾಗೂ ಸಾರ್ವಜನಿಕರ ಮೇಲೆ ತೋರುವ ಆರ್ಥಿಕ ಬಾಧೆ ಕುರಿತು ತೀವ್ರವಾಗಿ ಪ್ರಶ್ನಿಸಿತು.

“ಇದು ಉಚಿತ ಗ್ಯಾರಂಟಿಗಳ ಪರಿಣಾಮವೇ? ಜನರನ್ನು ಹಣ ಕೊಟ್ಟು ಮೀಟರ್ ಹಾಕಿಸಿಕೊಳ್ಳುವಂತಾಗಿಸುವುದು ನ್ಯಾಯವೇ? ಬಡವರು ಏನು ಮಾಡಬೇಕು?” ಎಂದು ನ್ಯಾಯಮೂರ್ತಿ ಪ್ರಶ್ನಿಸಿದರು. ನ್ಯಾಯಾಲಯ ತಾತ್ಕಾಲಿಕವಾಗಿ ನೋಟಿಸ್‌ಗೆ ತಡೆ ನೀಡಿದ್ದು, ರಾಜ್ಯ ಸರಕಾರ ಹಾಗೂ ಬೆಸ್ಕಾಂಗೆ ನೋಟಿಸ್ ಜಾರಿ ಮಾಡಲಾಗಿದೆ. ಮುಂದಿನ ವಿಚಾರಣೆ ಜೂನ್ 4ಕ್ಕೆ ಮುಂದೂಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.

ಹೊಸ ನಾಯಕನತ್ತ ಭಾರತೀಯ ಕ್ರಿಕೆಟ್: ರೋಹಿತ್ ಶರ್ಮಾ ಯುಗಾಂತ್ಯ?

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಹೊಸ ನಾಯಕನ ನೇಮಕ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಲಾಗಿದೆ.

ಪಾಕಿಸ್ತಾನದ ಕ್ರಿಕೆಟ್ ಮೈದಾನದಲ್ಲಿ ಸ್ಫೋಟ: ಕ್ರೀಡಾ ಪಂದ್ಯದ ನೆಪದಲ್ಲಿ ಭಯೋತ್ಪಾದಕರ ದಾಳಿ

ಪಂದ್ಯ ನಡೆಯುತ್ತಿದ್ದಾಗ ಮೈದಾನದಲ್ಲಿ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡಿದ್ದು, ಇದರ ಪರಿಣಾಮವಾಗಿ ಗಂಭೀರ ಅನಾಹುತ ಸಂಭವಿಸಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ಆತ್ರಾಡಿಯಲ್ಲಿ ಪೌಷ್ಟಿಕ ಆಹಾರದ ಕುರಿತು ಜನಜಾಗೃತಿ: ಡಾ. ಅನ್ವಿತಾ ಅವರಿಂದ ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್( ರಿ. ) ಉಡುಪಿ ಇವರಿಂದ ಪೌಷ್ಟಿಕ ಆಹಾರ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.