spot_img

ಮಹಾಕುಂಭಮೇಳದಲ್ಲಿ ಮೃತರ ಅಂಕಿಅಂಶಗಳು ಇನ್ನೂ ಹೊರಬಂದಿಲ್ಲ ಏಕೆ ? ಅಖಿಲೇಶ್ ಯಾದವ್

Date:

spot_img

ನವದೆಹಲಿ: ಮಹಾಕುಂಭಮೇಳದಲ್ಲಿ ಸರಕಾರದ ದುರಾಡಳಿತ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಲೋಕಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದರು.

“ಡಿಜಿಟಲೀಕರಣದ ಬಗ್ಗೆ ಹಿಗ್ಗಿ ಮಾತಾಡಿದ ಸರಕಾರ, ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರ ಅಂತಿಮ ಸಂಖ್ಯೆಗಳನ್ನೂ ನೀಡಲು ವಿಫಲವಾಗಿದೆ. 300 ಕಿಮೀ ಉದ್ದದ ಟ್ರಾಫಿಕ್ ಜಾಮ್‌ನಲ್ಲಿ ಭಕ್ತರು ಸಿಲುಕಿಕೊಂಡಿದ್ದಾರೆ, ಗಡಿಗಳನ್ನು ಮುಚ್ಚಲಾಗಿದೆ. ಇದು ‘ವಿಕಸಿತ್ ಭಾರತ’ದ ಚಿತ್ರಣವೇ?” ಎಂದು ಅವರು ಪ್ರಶ್ನಿಸಿದರು.

ಅಖಿಲೇಶ್ ಯಾದವ್ ಮತ್ತಷ್ಟು ಆಕ್ರೋಶ ವ್ಯಕ್ತಪಡಿಸುತ್ತಾ,”ಡಬಲ್ ಇಂಜಿನ್ ಸರಕಾರ,ಡಬಲ್ ಪ್ರಮಾದ ಮಾಡುತ್ತಿದೆ. ಭೂಮಿಯ ಮೇಲಿನ ಸಮಸ್ಯೆಗಳನ್ನು ಪರಿಹರಿಸಲು ನಮಗೆ ಸಾಧ್ಯವಾಗದಿದ್ದರೆ, ಚಂದ್ರನಲ್ಲಿಗೆ ಹೋಗಿ ಏನು ಮಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.

“ಡ್ರೋನ್ ಗಳು ಎಲ್ಲಿವೆ? ಸರ್ಕಾರ ಡಿಜಿಟಲೀಕರಣದ ಬಗ್ಗೆ ಜಾಹೀರಾತು ನೀಡಿದೆ, ಆದರೆ ಮಹಾಕುಂಭಮೇಳದಲ್ಲಿ ನಾಪತ್ತೆಯಾಗಿರುವ ಅಥವಾ ಸಾವನ್ನಪ್ಪಿದವರ ಅಂಕಿಅಂಶಗಳನ್ನು ನೀಡಲು ಇನ್ನೂ ಸಾಧ್ಯವಾಗಿಲ್ಲ” ಎಂದು ಅವರು ಗಂಭೀರ ಆರೋಪ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಲಕ್ಷಾಂತರ ರೂ. ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ.

ಕಲಾಪದ ವೇಳೆ ಮೊಬೈಲ್‌ನಲ್ಲಿ ‘ರಮ್ಮಿ’ ಆಟದಲ್ಲಿ ಮುಳುಗಿದ ಕೃಷಿ ಸಚಿವ

ಮಹಾರಾಷ್ಟ್ರ ವಿಧಾನಸಭೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಓರ್ವ ಸಚಿವರು ತಮ್ಮ ಮೊಬೈಲ್ ಫೋನ್‌ನಲ್ಲಿ 'ರಮ್ಮಿ' ಗೇಮ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಆಧಾರ್ ಕಾರ್ಡ್‌ಗೆ ಅವಧಿ ಇದೆಯೇ? ನಿಮ್ಮ ಆಧಾರ್ ಸಿಂಧುತ್ವವನ್ನು ಪರಿಶೀಲಿಸುವುದು ಹೇಗೆ?

ಸಾಮಾನ್ಯವಾಗಿ ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್‌ನಂತಹ ಗುರುತಿನ ಚೀಟಿಗಳಿಗೆ ನಿರ್ದಿಷ್ಟ ಅವಧಿ ಇರುತ್ತದೆ. ಆದರೆ, ಬಹುತೇಕರಿಗೆ ಆಧಾರ್ ಕಾರ್ಡ್‌ಗೆ ಎಕ್ಸ್‌ಪೈರಿ ದಿನಾಂಕದ ಬಗ್ಗೆ ಗೊಂದಲವಿದೆ.

ಉಪರಾಷ್ಟ್ರಪತಿ ಧಂಖರ್: ಭಾರತದ ಸಾರ್ವಭೌಮತೆಗೆ ಸವಾಲಿಲ್ಲ, ವಿದೇಶಿ ಹಸ್ತಕ್ಷೇಪ ಅಸಾಧ್ಯ

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳ ಕುರಿತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳ ಹಿನ್ನೆಲೆಯಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೇಶದ ಸಾರ್ವಭೌಮತ್ವ ಮತ್ತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ