spot_img

ಮಹಾಕುಂಭಮೇಳದಲ್ಲಿ ಮೃತರ ಅಂಕಿಅಂಶಗಳು ಇನ್ನೂ ಹೊರಬಂದಿಲ್ಲ ಏಕೆ ? ಅಖಿಲೇಶ್ ಯಾದವ್

Date:

ನವದೆಹಲಿ: ಮಹಾಕುಂಭಮೇಳದಲ್ಲಿ ಸರಕಾರದ ದುರಾಡಳಿತ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಲೋಕಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದರು.

“ಡಿಜಿಟಲೀಕರಣದ ಬಗ್ಗೆ ಹಿಗ್ಗಿ ಮಾತಾಡಿದ ಸರಕಾರ, ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರ ಅಂತಿಮ ಸಂಖ್ಯೆಗಳನ್ನೂ ನೀಡಲು ವಿಫಲವಾಗಿದೆ. 300 ಕಿಮೀ ಉದ್ದದ ಟ್ರಾಫಿಕ್ ಜಾಮ್‌ನಲ್ಲಿ ಭಕ್ತರು ಸಿಲುಕಿಕೊಂಡಿದ್ದಾರೆ, ಗಡಿಗಳನ್ನು ಮುಚ್ಚಲಾಗಿದೆ. ಇದು ‘ವಿಕಸಿತ್ ಭಾರತ’ದ ಚಿತ್ರಣವೇ?” ಎಂದು ಅವರು ಪ್ರಶ್ನಿಸಿದರು.

ಅಖಿಲೇಶ್ ಯಾದವ್ ಮತ್ತಷ್ಟು ಆಕ್ರೋಶ ವ್ಯಕ್ತಪಡಿಸುತ್ತಾ,”ಡಬಲ್ ಇಂಜಿನ್ ಸರಕಾರ,ಡಬಲ್ ಪ್ರಮಾದ ಮಾಡುತ್ತಿದೆ. ಭೂಮಿಯ ಮೇಲಿನ ಸಮಸ್ಯೆಗಳನ್ನು ಪರಿಹರಿಸಲು ನಮಗೆ ಸಾಧ್ಯವಾಗದಿದ್ದರೆ, ಚಂದ್ರನಲ್ಲಿಗೆ ಹೋಗಿ ಏನು ಮಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.

“ಡ್ರೋನ್ ಗಳು ಎಲ್ಲಿವೆ? ಸರ್ಕಾರ ಡಿಜಿಟಲೀಕರಣದ ಬಗ್ಗೆ ಜಾಹೀರಾತು ನೀಡಿದೆ, ಆದರೆ ಮಹಾಕುಂಭಮೇಳದಲ್ಲಿ ನಾಪತ್ತೆಯಾಗಿರುವ ಅಥವಾ ಸಾವನ್ನಪ್ಪಿದವರ ಅಂಕಿಅಂಶಗಳನ್ನು ನೀಡಲು ಇನ್ನೂ ಸಾಧ್ಯವಾಗಿಲ್ಲ” ಎಂದು ಅವರು ಗಂಭೀರ ಆರೋಪ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ತಡೆ: ಕಮಲ್ ಹಾಸನ್‌ಗೆ ಹೈಕೋರ್ಟ್ ಆದೇಶ

ನಟ ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ವಿವಾದ ಇತ್ಯರ್ಥವಾಗುವವರೆಗೆ ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ.

ಅತ್ರಾಡಿ ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಅತ್ರಾಡಿ ಶೇಡಿಗುಡ್ಡೆ ಬಳಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕೊರೊನಾ ಸೋಂಕಿನಿಂದ ಪೀಟರ್ ಮಥಾಯಸ್ ನಿಧನ: ತಹಶೀಲ್ದಾರ್ ಭೇಟಿನೀಡಿ ಸಾಂತ್ವನ

ಕಾಪು ತಾಲೂಕಿನ ಬೆಳ್ಳೆ ಗ್ರಾಮದ ನಿವಾಸಿ ಪೀಟರ್ ಮಥಾಯಸ್ (65) ಅವರು ಕೋವಿಡ್-19 ಪಾಸಿಟಿವ್ ದೃಢಪಟ್ಟ ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೂನ್ 2 ರಂದು ನಿಧನರಾದರು.

ಯೂರಿಕ್ ಆಸಿಡ್ ನಿಯಂತ್ರಣಕ್ಕೆ ಹಸಿ ಪಪ್ಪಾಯಿ – ನೈಸರ್ಗಿಕ ಮನೆಮದ್ದು!

ಅಧಿಕ ಯೂರಿಕ್ ಆಮ್ಲ ಸಮಸ್ಯೆ ಇತ್ತೀಚೆಗೆ ಸಾಮಾನ್ಯವಾಗಿದ್ದು, ಇದು ತಡವಾಗಿ ಗೋಚರಿಸುವ ಸಮಸ್ಯೆಯಾಗಿರುವುದರಿಂದ ಹೆಚ್ಚು ಮಂದಿಗೆ ಆರೋಗ್ಯದಲ್ಲಿ ಕಿರಿಕಿರಿ ಉಂಟುಮಾಡುತ್ತಿದೆ. ಈಗ, ಈ ಸಮಸ್ಯೆಗೆ ಹಸಿ ಪಪ್ಪಾಯಿ ಉತ್ತಮ ಮನೆಮದ್ದಾಗಿದೆ.