spot_img

‘ಫೋಟೋ ತೆಗೆಯುತ್ತೇನೆ’ ಎಂದು ಹೇಳಿ ಪತಿಯನ್ನು ಸೇತುವೆಯಿಂದ ನದಿಗೆ ತಳ್ಳಿದ ಪತ್ನಿ!

Date:

spot_img

ರಾಯಚೂರು: ರಾಯಚೂರು ಜಿಲ್ಲೆಯ ಗುರ್ಜಾಪುರ ಸೇತುವೆ ಕಂ ಬ್ಯಾರೇಜ್ ಬಳಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.

ದಂಪತಿಗಳು ಬೈಕ್‌ನಲ್ಲಿ ಸೇತುವೆಯ ಮೇಲೆ ಬಂದಿದ್ದು, ಫೋಟೋ ತೆಗೆಸಿಕೊಳ್ಳುವ ನೆಪದಲ್ಲಿ ಪತ್ನಿ ಮೊದಲು ತಾನೇ ನಿಂತು ಫೋಟೋ ತೆಗೆಸಿಕೊಂಡಿದ್ದಾಳೆ. ನಂತರ ಪತಿಯನ್ನು ಸೇತುವೆಯ ತುದಿಗೆ ನಿಲ್ಲಿಸಿ, “ಫೋಟೋ ತೆಗೆಯುತ್ತೇನೆ” ಎಂದು ಹೇಳಿ ಆತನನ್ನು ನದಿಗೆ ತಳ್ಳಿದ್ದಾಳೆ.

ನದಿಗೆ ಬಿದ್ದ ಪತಿ ಈಜಿಕೊಂಡು ಬಂದು ಬಂಡೆಯೊಂದರ ಮೇಲೆ ಕುಳಿತಿದ್ದಾನೆ. ಆತನ ಕಿರುಚಾಟ ಕೇಳಿದ ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸಿ, ಸುಮಾರು 2 ಗಂಟೆಗಳ ಕಾಲ ನದಿಯಲ್ಲಿಯೇ ಇದ್ದ ಆತನನ್ನು ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ.

ರಾಯಚೂರಿನ ಶಕ್ತಿನಗರದ ನಿವಾಸಿಗಳಾದ ಈ ದಂಪತಿಗಳ ನಡುವೆ ಜಗಳವಾಗಿದ್ದು, ಇದರ ಪರಿಣಾಮವಾಗಿ ಪತ್ನಿಯು ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಫೋಟೋ ತೆಗೆಯುವ ನೆಪದಲ್ಲಿ ಈ ಕೃತ್ಯ ಎಸಗಿದ್ದಾಳೆ ಎಂದು ವರದಿಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮುದ್ರಾಡಿ ಪ್ರೌಢಶಾಲೆಯಲ್ಲಿ “ಇಳೆಗೈಸಿರಿ” ವನಮಹೋತ್ಸವ ಕಾರ್ಯಕ್ರಮ

ಮುದ್ರಾಡಿ ಎಂ. ಎನ್.ಡಿ. ಎಸ್. ಎಂ.ಅನುದಾನಿತ ಪ್ರೌಢಶಾಲೆಯ ಕಲ್ಪನಾ ಪರಿಸರ ಸಂಘ ಮತ್ತು ಹೆಬ್ರಿ ಅರಣ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ ನಡೆದ "ಇಳೆಗೈಸಿರಿ" ವನಮಹೋತ್ಸವ ಕಾರ್ಯಕ್ರಮದಲ್ಲಿ ಪ್ರತಿ ಮಗುವಿನ ಮನೆಗೊಂದು ಗಿಡವನ್ನು ವಿತರಿಸಲಾಯಿತು.

ಡಾರ್ಕ್ ಅಂಡರ್‌ಆರ್ಮ್ಸ್ ಸಮಸ್ಯೆಯೇ? ಕಪ್ಪಾದ ಕಂಕುಳನ್ನು ಬೆಳ್ಳಗಾಗಿಸಲು ಇಲ್ಲಿದೆ ಸುಲಭ ಮನೆಮದ್ದುಗಳು!

ಕಪ್ಪಾದ ಕಂಕುಳನ್ನು ಬೆಳ್ಳಗಾಗಿಸಲು ಕೆಲವು ಸುಲಭ ಮನೆಮದ್ದುಗಳನ್ನು ಬಳಸಬಹುದು.

ರೈಲ್ವೆ ಪ್ರಯಾಣಿಕರಿಗೆ ಹೊಸ ಯುಗ: ‘ರೈಲ್ಒನ್’ ಸೂಪರ್ ಅಪ್ಲಿಕೇಶನ್ ಬಿಡುಗಡೆ – ಒಂದೇ ವೇದಿಕೆಯಲ್ಲಿ ಎಲ್ಲಾ ಸೇವೆಗಳು!

ಭಾರತೀಯ ರೈಲ್ವೆ ತನ್ನ ಪ್ರಯಾಣಿಕರ ಅನುಭವವನ್ನು ಕ್ರಾಂತಿಕಾರಿಯಾಗಿಸಲು ವಿನ್ಯಾಸಗೊಳಿಸಲಾದ "ರೈಲ್ಒನ್" ಎಂಬ ಹೊಚ್ಚಹೊಸ 'ಸೂಪರ್ ಅಪ್ಲಿಕೇಶನ್' ಅನ್ನು ಜುಲೈ 1, 2025 ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬಿಡುಗಡೆ ಮಾಡಿದ್ದಾರೆ.

ಮಂಗಳೂರಿನಲ್ಲಿ 4 ಕೋಟಿ ರೂ. ಉದ್ಯೋಗ ವಂಚನೆ: ಕೆಕೋಕಾ ಕಾಯ್ದೆಯಡಿ ಇಬ್ಬರು ಆರೋಪಿಗಳ ಬಂಧನ!

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 300ಕ್ಕೂ ಹೆಚ್ಚು ಮಂದಿಯಿಂದ ಸುಮಾರು ₹4 ಕೋಟಿಗೂ ಅಧಿಕ ವಂಚನೆ ಮಾಡಿದ ಆರೋಪದಡಿ, ಇಬ್ಬರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.