spot_img

ಎಸ್ಐಟಿ ತನಿಖೆ ಮುಗಿಯುವವರೆಗೆ ಧರ್ಮಸ್ಥಳ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ: ಗೃಹಸಚಿವ ಪರಮೇಶ್ವರ್

Date:

spot_img
spot_img

ಬೆಂಗಳೂರು : ಧರ್ಮಸ್ಥಳದಲ್ಲಿ ತಲೆಬುರುಡೆ ಪತ್ತೆ ಪ್ರಕರಣದ ಕುರಿತು ವಿಶೇಷ ತನಿಖಾ ದಳ (ಎಸ್ಐಟಿ) ವರದಿ ನೀಡುವವರೆಗೂ ನಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರು ಕೇಂದ್ರಕ್ಕೆ ವರ್ಗಾವಣೆಯಾಗುತ್ತಿರುವ ಬಗ್ಗೆ ಹಬ್ಬಿರುವ ವದಂತಿಗಳಿಗೂ ಅವರು ತೆರೆ ಎಳೆದರು.

ವರದಿ ಬರುವವರೆಗೆ ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತಾಡಲ್ಲ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಧರ್ಮಸ್ಥಳ ಪ್ರಕರಣದ ತನಿಖೆ ನಡೆಯುತ್ತಿರುವಾಗ ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ಎಸ್ಐಟಿ ವರದಿ ಬಂದ ನಂತರವೇ ನಾವು ಪ್ರತಿಕ್ರಿಯೆ ನೀಡುತ್ತೇವೆ” ಎಂದು ಹೇಳಿದರು. ಈ ಮೂಲಕ ತನಿಖೆಗೆ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಗೃಹ ಸಚಿವರು ಖಚಿತಪಡಿಸಿದರು.

ಪ್ರಣವ್ ಮೊಹಂತಿ ಭೇಟಿ ಹಿಂದಿನ ಸತ್ಯಾಂಶವೇನು?

ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರು ಇಂದು ಬೆಳಗ್ಗೆ ಗೃಹ ಸಚಿವರನ್ನು ಭೇಟಿ ಮಾಡಿದ್ದರ ಬಗ್ಗೆ ಹಲವು ಊಹಾಪೋಹಗಳು ಹಬ್ಬಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, “ಪ್ರಣವ್ ಮೊಹಂತಿ ಅವರಿಗೆ ಕೇಂದ್ರದಲ್ಲಿ ಹುದ್ದೆ ಸಿಕ್ಕಿದೆ. ಆ ಕುರಿತು ಮಾಹಿತಿ ನೀಡಲು ಅವರು ಬಂದಿದ್ದರು. ಜೊತೆಗೆ, ಫೇಕ್ ನ್ಯೂಸ್, ಆನ್‌ಲೈನ್ ಗೇಮ್‌ಗಳ ಬಗ್ಗೆ ತರಲು ಉದ್ದೇಶಿಸಿರುವ ಹೊಸ ನಿಯಮಗಳ ಬಗ್ಗೆ ಬ್ರೀಫಿಂಗ್ ಮಾಡಲು ಬಂದಿದ್ದರು. ಇದು ಬಿಟ್ಟು ಬೇರೆ ಯಾವುದೇ ವಿಚಾರವನ್ನು ಚರ್ಚಿಸಿಲ್ಲ” ಎಂದು ಹೇಳಿದರು.

ಕೇಂದ್ರದ ಹುದ್ದೆಗೆ ನೇಮಕ: ಗೊಂದಲಕ್ಕೆ ತೆರೆ ಎಳೆದ ಸಚಿವರು

ಪ್ರಣವ್ ಮೊಹಂತಿ ಅವರನ್ನು ಕೇಂದ್ರದ ಹುದ್ದೆಗೆ ವರ್ಗಾಯಿಸಲಾಗುತ್ತಿದೆ ಎಂಬ ಊಹಾಪೋಹಗಳಿಗೂ ಗೃಹ ಸಚಿವರು ಸ್ಪಷ್ಟನೆ ನೀಡಿದರು. “ಅವರು ಕೇವಲ ಆಯ್ಕೆಯಾಗಿದ್ದಾರೆ ಅಷ್ಟೇ. ಕೇಂದ್ರ ಸರ್ಕಾರದಿಂದ ಅಧಿಕೃತವಾಗಿ ಪತ್ರ ಬಂದು, ಅವರನ್ನು ಕಳುಹಿಸಿಕೊಡುವಂತೆ ಕೇಳಿದಾಗ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ಪ್ರಸ್ತುತ ಅವರು ಇಲ್ಲೇ ಇದ್ದಾರೆ” ಎಂದು ತಿಳಿಸಿದರು.

ಫೇಕ್ ನ್ಯೂಸ್ ಬಗ್ಗೆ ಸಚಿವರ ಎಚ್ಚರಿಕೆ

ಸಮಾಜದಲ್ಲಿ ಶಾಂತಿ ಕದಡುವ ಮತ್ತು ಭಾವನೆಗಳಿಗೆ ಧಕ್ಕೆ ತರುವಂತಹ ಪೋಸ್ಟ್‌ಗಳ ಕುರಿತು ಗೃಹ ಸಚಿವರು ಎಚ್ಚರಿಕೆ ನೀಡಿದರು. “ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಪೋಸ್ಟ್‌ಗಳನ್ನು ನಾವು ಗಮನಿಸುತ್ತಿದ್ದೇವೆ. ಈ ಹಿಂದೆ ದಕ್ಷಿಣ ಕನ್ನಡದಲ್ಲಿ ಕೋಮು ಗಲಭೆಗಳಿಗೆ ಕಾರಣವಾಗುವ ಪೋಸ್ಟ್‌ಗಳ ವಿರುದ್ಧ ಕ್ರಮ ಕೈಗೊಂಡಿದ್ದೆವು. ಈಗಲೂ ಇಲ್ಲಸಲ್ಲದ ವಿಷಯಗಳನ್ನು ಹಾಕಿ ಗೊಂದಲ ಸೃಷ್ಟಿಸಲು ಯತ್ನಿಸಿದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಪರಮೇಶ್ವರ್ ಖಡಕ್ ಎಚ್ಚರಿಕೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಧನತ್ರಯೋದಶಿ

ದೀಪಾವಳಿ ಹಬ್ಬದ ಮೊದಲ ದಿನವಾದ ಧನತ್ರಯೋದಶಿ (ಧನತೇರಸ್‌) ಯನ್ನು, ಆಶ್ವಯುಜ ಮಾಸದ ಕೃಷ್ಣ ಪಕ್ಷದ 13ನೇ ದಿನದಂದು ಸಂಭ್ರಮದಿಂದ ಆಚರಿಸಲಾಗುತ್ತದೆ

ಸೀರೆಯ ಸೌಂದರ್ಯಕ್ಕೆ ಆಕಾರ ಮುಖ್ಯವಲ್ಲ: ಮಹಿಳೆಯರಿಗಾಗಿ ಸೀರೆಯ ವಿನ್ಯಾಸ ಮತ್ತು ಶೈಲಿಯ ವಿಶೇಷ ಮಾರ್ಗದರ್ಶಿ

ದೇಹದ ಗಾತ್ರ ಎಷ್ಟೇ ಇದ್ದರೂ, ಸರಿಯಾದ ಆಯ್ಕೆ ಮತ್ತು ಡ್ರೇಪಿಂಗ್ ತಂತ್ರಗಳಿಂದ ಪ್ರತಿ ಪ್ಲಸ್ ಸೈಜ್ ಮಹಿಳೆಯೂ ಸೀರೆಯಯಲ್ಲಿ ವಿಶ್ವಾಸ ಮತ್ತು ಆಕರ್ಷಣೆಯಿಂದ ಮಿಂಚಬಹುದು

ಶಿವಮೊಗ್ಗ: ಧರ್ಮಸ್ಥಳ ಪ್ರಕರಣ; ಆರೋಪಿ ಚಿನ್ನಯ್ಯನ ವಿಚಾರಣೆ ಮತ್ತೆ ಆರಂಭ

ಧರ್ಮಸ್ಥಳ ಪರಿಸರದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು, ಪ್ರಮುಖ ಆರೋಪಿ ಚಿನ್ನಯ್ಯನನ್ನು ವಿಚಾರಣೆಗೊಳಪಡಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

‘ಹಿಂದೂ ಹುಡುಗಿಯರು ಜಿಮ್‌ಗೆ ಹೋಗಬಾರದು ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆ

ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರಾದ ಗೋಪಿಚಂದ್ ಪಡಲ್ಕರ್ ಅವರು ಹಿಂದೂ ಸಮುದಾಯದ ಯುವತಿಯರ ಕುರಿತು ನೀಡಿರುವ ಹೇಳಿಕೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ