spot_img

ವಿಶು ಶೆಟ್ಟಿಯವರ ನೆರವಿನಿಂದ ಮನೋರೋಗಿ ಸಹಜ ಸ್ಥಿತಿಯತ್ತ : ಹನ್ನೆರಡು ವರ್ಷಗಳ ಬಳಿಕ ಯುವಕ ಕುಟುಂಬಕ್ಕೆ

Date:

ಉಡುಪಿ : ಕಳೆದ ಕೆಲವು ದಿನಗಳ ಹಿಂದೆ ಉಡುಪಿಯ ಮಿತ್ರ ಆಸ್ಪತ್ರೆ ಬಳಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ ಯುವಕನೋರ್ವನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದ ಅಂಬಲಪಾಡಿಯ ವಿಶು ಶೆಟ್ಟಿ ಅವರ ಮಾನವೀಯ ಪ್ರಯತ್ನದಿಂದ ಇದೀಗ ಯುವಕ ತನ್ನ ಕುಟುಂಬವನ್ನು 12 ವರ್ಷಗಳ ಬಳಿಕ ಸೇರಿಕೊಂಡಿದ್ದಾನೆ.

ನವಲಗುಂದ ಮೂಲದ 33 ವರ್ಷದ ಸುಧಾಕರ ಪವಾರ್, 12 ವರ್ಷಗಳ ಹಿಂದೆ ಮನೆಯಿಂದ ಹೊರಟು ಹೋಗಿ ನಂತರ ಮಾನಸಿಕ ಅಸ್ವಸ್ಥ ಸ್ಥಿತಿಗೆ ತಲುಪಿದ್ದರು. ಇವರನ್ನು ರಕ್ಷಿಸಿದ ವಿಶು ಶೆಟ್ಟಿ ಅವರು ತಕ್ಷಣ ಬಾಳಿಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಯುವಕ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿ ಸಹಜ ಸ್ಥಿತಿಗೆ ಮರಳಿದ್ದಾರೆ.

ಸುಧಾಕರ ಪವಾರ್ ಅವರ ಕುಟುಂಬದ ಮಾಹಿತಿ ಲಭ್ಯವಾದ ನಂತರ, ಸಹೋದರ ಶ್ರೀನಿವಾಸ್ ಉಡುಪಿಗೆ ಆಗಮಿಸಿದ್ದಾರೆ. ಬಾಳಿಗಾ ಆಸ್ಪತ್ರೆಯ ವೈದ್ಯರು ರೋಗಿಯ ಸ್ಥಿತಿ ಮತ್ತು ಮುಂದಿನ ಚಿಕಿತ್ಸೆಯ ಬಗ್ಗೆ ಶ್ರೀನಿವಾಸ್‌ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. 12 ವರ್ಷಗಳ ಬಳಿಕ ಸಹೋದರನನ್ನು ಮತ್ತೆ ಮನೆಗೆ ಕರೆದುಕೊಂಡು ಹೋಗುವ ಸಂತಸದಲ್ಲಿರುವ ಶ್ರೀನಿವಾಸ್, ಈ ಪುನರ್ಮಿಲನಕ್ಕೆ ಸಹಕರಿಸಿದ ವಿಶು ಶೆಟ್ಟಿ ಹಾಗೂ ಚಿಕಿತ್ಸೆ ನೀಡಿದ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಅತ್ಯಂತ ಬಡತನದ ಕುಟುಂಬವಾಗಿರುವ ಸುಧಾಕರ ಪವಾರ್ ಅವರ ಕುಟುಂಬಕ್ಕೆ ಚಿಕಿತ್ಸೆಯ 15,500 ರೂ. ವೆಚ್ಚವನ್ನು ಭರಿಸಲು ಸಾಧ್ಯವಾಗದಿದ್ದಾಗ, ವಿಶು ಶೆಟ್ಟಿ ಅವರೇ ಸ್ವತಃ ಆ ವೆಚ್ಚವನ್ನು ಭರಿಸಿ ಮಾನವೀಯತೆ ಮೆರೆದಿದ್ದಾರೆ. ವಿಶು ಶೆಟ್ಟಿ ಅವರ ಸಕಾಲಿಕ ನೆರವು ಮತ್ತು ಮಾನವೀಯತೆಯಿಂದಾಗಿ ಸುಧಾಕರ ಪವಾರ್ ಅವರಿಗೆ ಹೊಸ ಜೀವನ ದೊರೆತಂತಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.