spot_img

ಮಲ್ಪೆ ಬಂದರಿಯಲ್ಲಿ ಮಹಿಳೆ ಹಲ್ಲೆ ಪ್ರಕರಣ: ಸಂತ್ರಸ್ತೆಯ ಪ್ರತಿಕ್ರಿಯೆ

Date:

spot_img

ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಕೂಡಾ ವಿಷಾದ ವ್ಯಕ್ತಪಡಿಸಿದ್ದರು. ಇದೀಗ ಹಲ್ಲೆಗೆ ಒಳಗಾದ ಮಹಿಳೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ನಾನು ಮೀನು ಕದ್ದಿದ್ದೇನೆಂದು ಆರೋಪಿಸಿ ಹೊಡೆದಿದ್ದಾರೆ. ಅದಾದ ಬಳಿಕ ನಾನು ಬಂದರಿಗೆ ಹೋಗಿಲ್ಲ. ಇಲ್ಲಿ ಕೆಲಸ ಮಾಡುವುದು ಕಷ್ಟ, ಆದ್ದರಿಂದ ನಾವು ನಮ್ಮ ಊರಿಗೆ ವಾಪಸ್ ಹೋಗುತ್ತಿದ್ದೇವೆ,” ಎಂದರು.

ಅಲ್ಲದೆ, “ಸ್ವಲ್ಪ ಮೀನು ತೆಗೆದದ್ದು ಸತ್ಯ. ಬಂದರಿನಲ್ಲಿ ಅದೊಂದು ಸಾಮಾನ್ಯ ವಿಚಾರ. ಆ ದಿನ ನನ್ನ ಗ್ರಹಚಾರ ಸರಿ ಇರಲಿಲ್ಲ. ಆದರೆ ಈಗ ಇಲ್ಲಿ ಉಳಿಯುವುದು ಕಷ್ಟ. ಯಾರೂ ನನಗೆ ತೊಂದರೆ ಕೊಟ್ಟಿಲ್ಲ. ನನಗೆ ಅವರ ಮೇಲೆ ದ್ವೇಷವಿಲ್ಲ, ಅವರಿಗೆ ನನ್ನ ಮೇಲೆ ದ್ವೇಷವಿಲ್ಲ,” ಎಂದೂ ಹೇಳಿದ್ದಾರೆ.

ಅವರು ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, “ಆ ದಿನ ರಾತ್ರಿ ನಾವು ರಾಜಿ ಮಾಡಿಕೊಂಡಿದ್ದೆವು. ಮೇಲಿಂದ ದೂರು ಕೊಡಲು ಹೇಳಿದ್ದಾರೆ, ಅವರ ಮಾತಿಗೆ ನಾನು ಸಹಿ ಮಾಡಿದ್ದೇನೆ. ಯಾರಿಗೂ ಶಿಕ್ಷೆಯಾಗಬಾರದು, ಅವರ ಪಾಡಿಗೆ ಅವರು, ನಮ್ಮ ಪಾಡಿಗೆ ನಾವು,” ಎಂದು ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾಂಗ್ರೆಸ್ ಬೂತ್ ಸಮಿತಿ ಸಭೆ: ಪಕ್ಷ ಸಂಘಟನೆಗೆ ನಾಯಕರಿಂದ ಮಾರ್ಗದರ್ಶನ

ಗ್ರಾಮೀಣ ಕಾಂಗ್ರೆಸ್ ಸಮಿತಿ, ಪಳ್ಳಿ-ನಿಂಜೂರು ಆಯೋಜಿಸಿದ್ದ ಪಳ್ಳಿ ಗ್ರಾಮದ ಬೂತ್ ಸಂಖ್ಯೆ 122ರ ಬೂತ್ ಸಮಿತಿ ಸಭೆಯು ಜುಲೈ 20, 2025ರ ಭಾನುವಾರ ಸಂಜೆ 5:00 ಗಂಟೆಗೆ ನಡೆಯಿತು.

ಮುದ್ರಾಡಿ ಪ್ರೌಢಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ: ಯೋಧರಿಗೆ ಭಾವಪೂರ್ಣ ಗೌರವ

ಭಾರತದ ಅಪ್ರತಿಮ ಶೌರ್ಯ ಮತ್ತು ತ್ಯಾಗವನ್ನು ಸಾರುವ ಕಾರ್ಗಿಲ್ ವಿಜಯ ದಿವಸವನ್ನು ಮುದ್ರಾಡಿಯ ಎಂ.ಎನ್.ಡಿ.ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಇಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ