ಮಲ್ಪೆ ಬಂದರಿಯಲ್ಲಿ ಮಹಿಳೆ ಹಲ್ಲೆ ಪ್ರಕರಣ: ಸಂತ್ರಸ್ತೆಯ ಪ್ರತಿಕ್ರಿಯೆ

Date:

spot_img

ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಕೂಡಾ ವಿಷಾದ ವ್ಯಕ್ತಪಡಿಸಿದ್ದರು. ಇದೀಗ ಹಲ್ಲೆಗೆ ಒಳಗಾದ ಮಹಿಳೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ನಾನು ಮೀನು ಕದ್ದಿದ್ದೇನೆಂದು ಆರೋಪಿಸಿ ಹೊಡೆದಿದ್ದಾರೆ. ಅದಾದ ಬಳಿಕ ನಾನು ಬಂದರಿಗೆ ಹೋಗಿಲ್ಲ. ಇಲ್ಲಿ ಕೆಲಸ ಮಾಡುವುದು ಕಷ್ಟ, ಆದ್ದರಿಂದ ನಾವು ನಮ್ಮ ಊರಿಗೆ ವಾಪಸ್ ಹೋಗುತ್ತಿದ್ದೇವೆ,” ಎಂದರು.

ಅಲ್ಲದೆ, “ಸ್ವಲ್ಪ ಮೀನು ತೆಗೆದದ್ದು ಸತ್ಯ. ಬಂದರಿನಲ್ಲಿ ಅದೊಂದು ಸಾಮಾನ್ಯ ವಿಚಾರ. ಆ ದಿನ ನನ್ನ ಗ್ರಹಚಾರ ಸರಿ ಇರಲಿಲ್ಲ. ಆದರೆ ಈಗ ಇಲ್ಲಿ ಉಳಿಯುವುದು ಕಷ್ಟ. ಯಾರೂ ನನಗೆ ತೊಂದರೆ ಕೊಟ್ಟಿಲ್ಲ. ನನಗೆ ಅವರ ಮೇಲೆ ದ್ವೇಷವಿಲ್ಲ, ಅವರಿಗೆ ನನ್ನ ಮೇಲೆ ದ್ವೇಷವಿಲ್ಲ,” ಎಂದೂ ಹೇಳಿದ್ದಾರೆ.

ಅವರು ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, “ಆ ದಿನ ರಾತ್ರಿ ನಾವು ರಾಜಿ ಮಾಡಿಕೊಂಡಿದ್ದೆವು. ಮೇಲಿಂದ ದೂರು ಕೊಡಲು ಹೇಳಿದ್ದಾರೆ, ಅವರ ಮಾತಿಗೆ ನಾನು ಸಹಿ ಮಾಡಿದ್ದೇನೆ. ಯಾರಿಗೂ ಶಿಕ್ಷೆಯಾಗಬಾರದು, ಅವರ ಪಾಡಿಗೆ ಅವರು, ನಮ್ಮ ಪಾಡಿಗೆ ನಾವು,” ಎಂದು ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.