ಛಾವಣಿ ತಗಡು ಅಳವಡಿಸುವಾಗ ಆಯ ತಪ್ಪಿ ಬಿದ್ದು ಕಾರ್ಮಿಕನ ದುರ್ಮರಣ

Date:

spot_img

ಉಡುಪಿ, ಫೆಬ್ರವರಿ.17: ಅಂಬಲಪಾಡಿ ಕುಂಜಿಗುಡ್ಡೆ ಬಳಿಯ ನಿರ್ಮಾಣ ಹಂತದ ಮನೆಯಲ್ಲಿ ಛಾವಣಿ ತಗಡು ಅಳವಡಿಸುವ ವೇಳೆ 30 ಅಡಿ ಎತ್ತರದಿಂದ ಬಿದ್ದು ಸುರೇಶ್ ಆಚಾರ್ಯ (38) ದುರ್ಮರಣಕ್ಕೀಡಾದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಸುಮಾರು ಎರಡು ವಾರಗಳಿಂದ ಈ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುರೇಶ್ ಆಚಾರ್ಯ, ಗುತ್ತಿಗೆದಾರ ಭರತ್ ಅವರ ಸೂಚನೆಯ ಮೇರೆಗೆ ಸಹಾಯಕ ಗಣೇಶ್ ಜೊತೆ ಛಾವಣಿ ಮೇಲಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಘಟನೆಗೆ ಗುತ್ತಿಗೆದಾರ ಭರತ್ ಮತ್ತು ಕಟ್ಟಡದ ಎಂಜಿನಿಯರ್ ದೀಪಕ್ ಕುಮಾರ್ ಅವರ ನಿರ್ಲಕ್ಷ್ಯ ಕಾರಣ ಎಂಬ ಆರೋಪ ಕೇಳಿಬಂದಿದ್ದು ,ಸುರಕ್ಷಾ ಕ್ರಮಗಳಿಲ್ಲದೆ ಕಾಮಗಾರಿ ನಡೆಸಿದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ಮೃತನ ಪತ್ನಿ ಉಡುಪಿ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಪತ್ರಿಕಾ ವಿತರಕರಾಗಿ ಸೇವೆ:
ಸುರೇಶ್ ಆಚಾರ್ಯ ಕಳೆದ 18 ವರ್ಷಗಳಿಂದ ಅಜ್ಜರಕಾಡು, ಬ್ರಹ್ಮಗಿರಿ, ಅಂಬಲಪಾಡಿ ಪ್ರದೇಶದಲ್ಲಿ ಪತ್ರಿಕಾ ವಿತರಣೆಯಲ್ಲಿ ತೊಡಗಿದ್ದವರು. ಅವರ ಅಕಾಲಿಕ ನಿಧನಕ್ಕೆ ಸಹೋದ್ಯೋಗಿಗಳು ಹಾಗೂ ಸ್ನೇಹಿತರು ಸಂತಾಪ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.