spot_img

ಜಗತ್ತಿನ ಅತ್ಯುನ್ನತ ಹವಾಮಾನ ಮುನ್ಸೂಚನಾ ವ್ಯವಸ್ಥೆ: ಕೇಂದ್ರ ಸರ್ಕಾರದಿಂದ “ಭಾರತ್ ಫೋರ್‌ಕಾಸ್ಟಿಂಗ್ ಸಿಸ್ಟಂ” ಅನಾವರಣ

Date:

ಹೊಸದಿಲ್ಲಿ: ಭಾರತದ ಹವಾಮಾನ ಮುನ್ಸೂಚನೆ ಕ್ಷೇತ್ರದಲ್ಲಿ ಬೃಹತ್ ತಂತ್ರಜ್ಞಾನ ಯುಗದ ಪ್ರಾರಂಭವಾಗಿದ್ದು, ಕೇಂದ್ರ ಸರ್ಕಾರ ಸೋಮವಾರ ನೂತನ “ಭಾರತ್ ಫೋರ್‌ಕಾಸ್ಟಿಂಗ್ ಸಿಸ್ಟಂ” (Bharat Forecasting System – BFS) ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದೆ.

ಈ ಅತ್ಯಾಧುನಿಕ ವ್ಯವಸ್ಥೆಯನ್ನು ಪುಣೆಯ “ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮೀಟಿಯರಾಲಜಿ” (IITM) ಅಭಿವೃದ್ಧಿಪಡಿಸಿದ್ದು, ದೇಶದ ಹವಾಮಾನ ಸಂಶೋಧನೆ ಹಾಗೂ ಮುನ್ಸೂಚನೆ ವ್ಯವಸ್ಥೆಗೆ ಹೊಸ ದಿಕ್ಕು ನೀಡಲಿದೆ. ಇದರಲ್ಲಿ 66×6 ಕಿ.ಮೀ. ರೆಸಲ್ಯೂಶನ್ ಗ್ರಿಡ್ ಬಳಕೆಯಾಗುತ್ತಿದ್ದು, ಹಳೆಯ 12×12 ಕಿ.ಮೀ. ರೆಸಲ್ಯೂಶನ್‌ಗಿಂತ ಮುನ್ಸೂಚನೆಗಳನ್ನು ಹೆಚ್ಚು ನಿಖರವಾಗಿ ನೀಡಲಿದೆ.

ಈ ವ್ಯವಸ್ಥೆಯ ಭಾಗವಾಗಿರುವ “ಆರ್ಕ್” ಎಂಬ ಸೂಪರ್ ಕಂಪ್ಯೂಟರ್‌ನಲ್ಲಿ 11.77 ಪೆಟಾಫ್ಲಾಪ್ ಪ್ರೊಸೆಸಿಂಗ್ ಶಕ್ತಿ ಮತ್ತು 33 ಪೆಟಾಬೈಟ್‌ಗಳ ದತ್ತಾಂಶ ಸಂಗ್ರಹ ಸಾಮರ್ಥ್ಯವಿದೆ. ಹೀಗಾಗಿ ಹಿಂದಿನ “ಪ್ರತ್ಯುಷಾ ” ಸೂಪರ್ ಕಂಪ್ಯೂಟರ್‌ಗೆ ಬೇಕಾಗುವ 10 ಗಂಟೆಗಳ ಬದಲಿಗೆ ಕೇವಲ 4 ಗಂಟೆಗಳಲ್ಲಿ ದತ್ತಾಂಶ ವಿಶ್ಲೇಷಣೆ ಪೂರೈಸುವ ಸಾಮರ್ಥ್ಯ ಈ ವ್ಯವಸ್ಥೆಗೆ ಇದೆ.

ದೇಶದಾದ್ಯಂತ 40 ಡಾಪ್ಲರ್ ಹವಾಮಾನ ರಾಡಾರ್‌ಗಳ ಜಾಲದ ಮೂಲಕ ಸಂಗ್ರಹವಾಗುವ ಮಾಹಿತಿ ಬಳಸಿ, BFS ನಿಖರ ಹವಾಮಾನ ಮುನ್ಸೂಚನೆಗಳನ್ನು ನೀಡಲಿದ್ದು, ಪ್ರಕೃತಿ ವಿಕೋಪಗಳು, ಕೃಷಿ ನಿರ್ವಹಣೆ ಹಾಗೂ ಸಾರ್ವಜನಿಕ ಎಚ್ಚರಿಕೆಗಾಗಿ ಇದು ಭವಿಷ್ಯದಲ್ಲಿ ಬಹುಮುಖ್ಯ ಪಾತ್ರ ವಹಿಸಲಿದೆ.

ಭಾರತದ ಹವಾಮಾನ ವಿಜ್ಞಾನ ಕ್ಷೇತ್ರಕ್ಕೆ ಇದು ಮೈಲಿಗಲ್ಲಾಗಲಿದ್ದು, ಜಾಗತಿಕ ಮಟ್ಟದಲ್ಲಿಯೇ ಅತ್ಯಂತ ನಿಖರ ಮುನ್ಸೂಚನೆ ನೀಡುವ ವ್ಯವಸ್ಥೆಯಾಗಿ ಗುರುತಿಸಿಕೊಳ್ಳಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ತಡೆ: ಕಮಲ್ ಹಾಸನ್‌ಗೆ ಹೈಕೋರ್ಟ್ ಆದೇಶ

ನಟ ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ವಿವಾದ ಇತ್ಯರ್ಥವಾಗುವವರೆಗೆ ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ.

ಅತ್ರಾಡಿ ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಅತ್ರಾಡಿ ಶೇಡಿಗುಡ್ಡೆ ಬಳಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕೊರೊನಾ ಸೋಂಕಿನಿಂದ ಪೀಟರ್ ಮಥಾಯಸ್ ನಿಧನ: ತಹಶೀಲ್ದಾರ್ ಭೇಟಿನೀಡಿ ಸಾಂತ್ವನ

ಕಾಪು ತಾಲೂಕಿನ ಬೆಳ್ಳೆ ಗ್ರಾಮದ ನಿವಾಸಿ ಪೀಟರ್ ಮಥಾಯಸ್ (65) ಅವರು ಕೋವಿಡ್-19 ಪಾಸಿಟಿವ್ ದೃಢಪಟ್ಟ ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೂನ್ 2 ರಂದು ನಿಧನರಾದರು.

ಯೂರಿಕ್ ಆಸಿಡ್ ನಿಯಂತ್ರಣಕ್ಕೆ ಹಸಿ ಪಪ್ಪಾಯಿ – ನೈಸರ್ಗಿಕ ಮನೆಮದ್ದು!

ಅಧಿಕ ಯೂರಿಕ್ ಆಮ್ಲ ಸಮಸ್ಯೆ ಇತ್ತೀಚೆಗೆ ಸಾಮಾನ್ಯವಾಗಿದ್ದು, ಇದು ತಡವಾಗಿ ಗೋಚರಿಸುವ ಸಮಸ್ಯೆಯಾಗಿರುವುದರಿಂದ ಹೆಚ್ಚು ಮಂದಿಗೆ ಆರೋಗ್ಯದಲ್ಲಿ ಕಿರಿಕಿರಿ ಉಂಟುಮಾಡುತ್ತಿದೆ. ಈಗ, ಈ ಸಮಸ್ಯೆಗೆ ಹಸಿ ಪಪ್ಪಾಯಿ ಉತ್ತಮ ಮನೆಮದ್ದಾಗಿದೆ.