spot_img

ಇಂದು ದಿಲ್ಲಿಗೆ ಯತ್ನಾಳ್ ಬಣ! ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ

Date:

spot_img

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಸಮೀಪಿಸುತ್ತಿರುವಂತೆ, ಪಕ್ಷದ ಒಳಗಿನ ಆಂತರಿಕ ರಾಜಕೀಯ ತೀವ್ರಗೊಳ್ಳುತ್ತಿದೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಣ, ಸೋಮವಾರದಿಂದ ನಾಲ್ಕು ದಿನಗಳ ಕಾಲ ದಿಲ್ಲಿಯಲ್ಲಿ ಬೀಡು ಬೀಡಲಿದ್ದು, ಹೈಕಮಾಂಡ್ ಒಲವು ಸಂಪಾದಿಸಲು ಮುಂದಾಗಿದೆ.

ಭಾನುವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಇತರ ಪ್ರಮುಖರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ದಿಲ್ಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ತಂಡದ ಪ್ರಮುಖರಾದ ಅರವಿಂದ ಲಿಂಬಾವಳಿ ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದು, ಉಳಿದ ನಾಯಕರೂ ದಿಲ್ಲಿಯಲ್ಲಿ ಹೈಕಮಾಂಡ್ ಭೇಟಿಗೆ ಅವಕಾಶಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

ಸದ್ಯ ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುಲಭ ಭೇಟಿಗೆ ಅವಕಾಶ ಸಿಗಬಹುದು ಎಂಬ ಲೆಕ್ಕಾಚಾರದಲ್ಲಿ ಈ ಬಣ ದಿಲ್ಲಿಗೆ ತೆರಳುತ್ತಿದೆ. ಇದೇ ತಂಡ ಸಂಸತ್‌ನಲ್ಲಿ ಸೋಮವಾರ ಮಂಡನೆಯಾಗಲಿರುವ ವಕ್ಸ್ ಆಸ್ತಿಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯನ್ನೂ ಸಾಕ್ಷೀಕರಿಸುವ ಸಾಧ್ಯತೆ ಇದೆ. ಸಂಸತ್‌ನಲ್ಲಿ ಜಗದಂಬಿಕಾ ಪಾಲ್ ಈ ವರದಿಯನ್ನು ಮಂಡಿಸಲಿದ್ದಾರೆ.

ಫೆಬ್ರವರಿ 5ರಂದು ದಿಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದು, ನಂತರ ಫಲಿತಾಂಶ ಹಾಗೂ ಸರ್ಕಾರ ರಚನೆ ಕಸರತ್ತು ನಡೆಯುವ ಕಾರಣ, ಬಿಜೆಪಿ ಹೈಕಮಾಂಡ್ ಈ ನಡುವೆಯೂ ರಾಜ್ಯಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಮಾತುಕತೆ ನಡೆಸಬಹುದೆಂಬ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ, ಇತ್ತೀಚೆಗೆ ನಡೆದ ಜಿಲ್ಲಾಧ್ಯಕ್ಷರ ಆಯ್ಕೆ ಕ್ರಮಬದ್ಧವಾಗಿರಲಿಲ್ಲ ಎಂಬ ಗಂಭೀರ ದೂರುಗಳನ್ನು ಹೈಕಮಾಂಡ್‌ಗೆ ಈ ಬಣ ತಿಳಿಸುವ ಸಾಧ್ಯತೆಯೂ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾನವ ಮೆದುಳಿನ ಕೋಶಗಳಿಂದ ನಿಯಂತ್ರಿಸಲ್ಪಟ್ಟ ರೋಬೋಟ್‌ನ ಹೊಸ ಅವತಾರ: AI ಗಿಂತಲೂ ಬುದ್ಧಿವಂತಿಕೆ

AI ಮಾನವರ ಬುದ್ಧಿಮತ್ತೆಯ ಮಟ್ಟವನ್ನು ಹೊಂದಿಕೆಯಾಗುವುದಿಲ್ಲ, ಆದ್ದರಿಂದ ವಿಜ್ಞಾನಿಗಳು ಈಗ ಮಾನವ ಮೆದುಳನ್ನು AI ಗೆ ನೀಡಿದ್ದಾರೆ

ಕಪ್ಪು ಕಲೆಗಳಿರುವ ಈರುಳ್ಳಿ: ಅಪಾಯಕಾರಿ ಎಚ್ಚರಿಕೆ ಮತ್ತು ವೈಜ್ಞಾನಿಕ ಸಂಗ್ರಹಣೆಯ ಮಾರ್ಗದರ್ಶನ

ನಮ್ಮ ದೈನಂದಿನ ಅಡುಗೆಯಲ್ಲಿ ಈರುಳ್ಳಿ ಒಂದು ಅವಿಭಾಜ್ಯ ಭಾಗ. ಅದರ ಸುವಾಸನೆ ಮತ್ತು ರುಚಿ ಯಾವುದೇ ಖಾದ್ಯಕ್ಕೆ ಜೀವ ತುಂಬುತ್ತದೆ. ಅಡುಗೆಮನೆಯ ಪ್ರಮುಖ ಸಾಮಗ್ರಿಯಾದ ಈರುಳ್ಳಿ, ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಕರ್ನಾಟಕದಲ್ಲಿ VIP ಗಳ ಸೈರನ್ ಹಾರ್ನ್ ಬಳಕೆ ನಿಷೇಧ: ಡಿಜಿಪಿಯಿಂದ ಮಹತ್ವದ ಆದೇಶ

ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ (VIP) ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಹಾರ್ನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ), ಡಾ. ಎಂ.ಎ. ಸಲೀಂ ಅವರು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಜಗದೀಪ್‌ ಧನ್ಕರ್‌ ಉಪರಾಷ್ಟ್ರಪತಿ ಸ್ಥಾನಕ್ಕೆ ಅನಿರೀಕ್ಷಿತ ರಾಜೀನಾಮೆ: ಆರೋಗ್ಯ ಕಾರಣ ನೀಡಿದ ಧನ್ಕರ್‌

ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನ್ಕರ್‌ ಅವರು ತಮ್ಮ ಸ್ಥಾನಕ್ಕೆ ಸೋಮವಾರ ದಿಢೀರ್‌ ರಾಜೀನಾಮೆ ಸಲ್ಲಿಸಿದ್ದಾರೆ.