spot_img

“ಯತ್ನಾಳ್ ನಕಲಿ ಹಿಂದೂ, ಜಮೀರ್ ಕೋಮು ಪ್ರಚೋದಕ” – ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ

Date:

spot_img

ಬೀದರ್ : ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಿಡಿಕಾರಿದ್ದಾರೆ. “ಯತ್ನಾಳ್ ನಕಲಿ ಹಿಂದೂ, ಹುಲಿ ಅಲ್ಲ ಇಲಿ. ಜಮೀರ್ ನಕಲಿ ಧಾರ್ಮಿಕ ನಾಯಕ. ಇಬ್ಬರೂ ರಾಜಕೀಯದ ಹೆಸರಲ್ಲಿ ಜನರನ್ನು ಮೋಸಗೊಳಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಸೋಮವಾರ ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, “ಯತ್ನಾಳ್ ಹಿಂದೂತ್ವದ ಹೆಸರಿನಲ್ಲಿ ನಾಟಕ ಮಾಡುತ್ತಿದ್ದಾರೆ. ಜೆಡಿಎಸ್‌ಗೆ ಸೇರಿ ಚಿಕನ್ ಕಬಾಬ್ ತಿಂದು, ಅಲ್ಪಸಂಖ್ಯಾತರ ಧರ್ಮಚಿಹ್ನೆ ಧರಿಸಿ ಟಿಪ್ಪು ಖಡ್ಗ ಹಿಡಿದು ಇಪ್ತಿಯಾರ್ ಕೂಟ ಮಾಡಿದ್ದವರು , ಇಂದು ಹಿಂದೂ ಹೆಸರಿನಲ್ಲಿ ಹದ್ದು ಮೀರಿ ಮಾತನಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಒಂದು ಬಾರಿ ಉತ್ತರ ಕರ್ನಾಟಕ ಹುಲಿ, ಮತ್ತೊಮ್ಮೆ ಪಂಚಮಸಾಲಿ ಹುಲಿ, ಮುಂದೆ ಹಿಂದೂ ಹುಲಿ ಎನ್ನಿಸುತ್ತಾರೆ. ಇದು ಯಾರಿಗೆ ತೋರಿಸಲು? ಜನತೆಗೆ ಖಂಡಿತವಾಗಿಯೂ ಈ ನಾಟಕಗಳು ಅರ್ಥವಾಗುತ್ತಿವೆ” ಎಂದು ಟೀಕಿಸಿದರು.

ಅದೇ ರೀತಿ ಜಮೀರ್ ಅಹ್ಮದ್ ವಿರುದ್ಧವೂ ಗಂಭೀರ ಆರೋಪ ಹೊರಿಸಿ, “ಡಿಜೆ ಹಳ್ಳಿ, ಕೆಜಿ ಹಳ್ಳಿ ಕೋಮು ಗಲಭೆಗೆ ನಿಜವಾದ ಹೊಣೆಗಾರನು ಜಮೀರ್. ಪ್ರಚಾರಕ್ಕಾಗಿ ಹಲ್ಲು ಕಡಿದು ಡೊಂಬರಾಟ ಮಾಡುವವರು. ಯುದ್ಧಕ್ಕೆ ಹೋಗುವೆ ಎಂದು ಹೇಳಿಕೆ ನೀಡುವ ಬದಲು, ರಾಜ್ಯದಲ್ಲಿ ಕೋಮು ಶಾಂತತೆ ಕಾಪಾಡುವ ಕೆಲಸ ಮಾಡಲಿ” ಎಂದು ತೀವ್ರವಾಗಿ ಕಿಡಿಕಾರಿದರು.

ಇದು ಮುಂದಿನ ಚುನಾವಣಾ ಹಿನ್ನಲೆಯಲ್ಲಿ ಸಕ್ರಿಯವಾಗುತ್ತಿರುವ ಒಳರಾಜಕೀಯ ದಾಳಿ-ಪ್ರತಿದಾಳಿ ರಾಜಕಾರಣದ ಭಾಗವಾಗಿದ್ದು, ಪಕ್ಷದ ಒಳವಿವಾದಗಳು ಮತ್ತಷ್ಟು ದ್ವಿಗುಣಗೊಳ್ಳುವ ಲಕ್ಷಣಗಳಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರೋಗ್ಯಕ್ಕೆ ಮಾರಕವಾಗಬಲ್ಲ ದಿನನಿತ್ಯದ ಸೊಪ್ಪು: ಕಿಡ್ನಿ ಕಲ್ಲುಗಳ ಸೃಷ್ಟಿಗೆ ಪ್ರಮುಖ ಕಾರಣ!

ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾದ ಮೂತ್ರಪಿಂಡಗಳು, ರಕ್ತವನ್ನು ಶುದ್ಧೀಕರಿಸಿ ವಿಷಕಾರಿ ಅಂಶಗಳನ್ನು ಹೊರಹಾಕುವ ಕಾರ್ಯವನ್ನು ನಿರಂತರವಾಗಿ ಮಾಡುತ್ತವೆ.

“ಸು ಫ್ರಮ್‌ ಸೋ” ಅಬ್ಬರ: ಸಣ್ಣ ಬಜೆಟ್, ದೊಡ್ಡ ಕಲೆಕ್ಷನ್ – ಇದು ಕಂಟೆಂಟ್ ತಾಕತ್ತು!

ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್‌ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಉಡುಪಿಯಲ್ಲಿ ವರುಣನ ಆರ್ಭಟ: ಆಸ್ತಿಪಾಸ್ತಿಗೆ ಹಾನಿ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ

ಹರಿದ್ವಾರದಲ್ಲಿ ದುರಂತ: ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತ, 7 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದಲ್ಲಿರುವ ಪ್ರಸಿದ್ಧ ಮಾನಸಾ ದೇವಿ ದೇವಾಲಯದಲ್ಲಿ ಭಾನುವಾರ (ಜುಲೈ 27) ಸಂಭವಿಸಿದ ದುರದೃಷ್ಟಕರ ಕಾಲ್ತುಳಿತದಲ್ಲಿ ಏಳು ಭಕ್ತರು ಪ್ರಾಣ ಕಳೆದುಕೊಂಡಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ