
“ದೇಹ ಮತ್ತು ಮನಸ್ಸುಗಳನ್ನು ಬೆಸೆಯುವ ಆಧ್ಯಾತ್ಮಿಕ ಪ್ರಕ್ರಿಯೆಯೇ ಯೋಗ “-ಬಲ್ಲಾಡಿ ಚಂದ್ರಶೇಖರ ಭಟ್
ಹೆಬ್ರಿ :ಪ್ರತಿನಿತ್ಯವೂ ಕ್ರಮಬದ್ದವಾಗಿ ಯೋಗಾಸನಗಳನ್ನು ಮಾಡುವುದರಿಂದ ನಾವು ಆರೋಗ್ಯವಂತರಾಗಿ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು.ಯೋಗಾಸನ ಮಾಡುವುದರಿಂದ ದೇಹದ ಪ್ರತಿಯೊಂದು ಭಾಗಕ್ಕೆ ರಕ್ತ ಸಂಚಾರ ಸರಿಯಾಗಿ ಆಗುತ್ತದೆ. ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಮಾನಸಿಕ ಸ್ಥಿರತೆ ಹಾಗೂ ಏಕಾಗ್ರತೆಯು ಹೆಚ್ಚಾಗುತ್ತದೆ. ಬೊಜ್ಜು, ಅಧಿಕ ರಕ್ತದೊತ್ತಡ ಮತ್ತು ಹೃದಯದ ತೊಂದರೆಗಳು ಸೇರಿ ಅನೇಕ ರೋಗಗಳನ್ನು ನಿವಾರಿಸುವ ಸಾಮರ್ಥ್ಯ ಯೋಗಕ್ಕಿದೆ.ದೇಹ ಮತ್ತು ಮನಸ್ಸುಗಳನ್ನು ಬೆಸೆಯುವ ಯೋಗಾಭ್ಯಾಸವನ್ನು ಎಲ್ಲರೂ ಅನುಸರಿಸುವುದು ಉತ್ತಮ ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಹೇಳಿದರು.
ಅವರು ತಮ್ಮ ಶಾಲೆಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಘುಪತಿ ಹೆಬ್ಬಾರ್ ಸ್ವಾಗತಿಸಿ, ಯೋಗಾಸನವನ್ನು ನಡೆಸಿಕೊಟ್ಟರು. ಶಿಕ್ಷಕ ಪಿ. ವಿ. ಆನಂದ ಸಾಲಿಗ್ರಾಮ ವಂದಿಸಿದರು. ಶಾಲಾ ಶಿಕ್ಷಕರಾದ ಮಹೇಶ್ ನಾಯ್ಕ್, ಶ್ಯಾಮಲಾ ಕೊಠಾರಿ, ಚಂದ್ರಕಾಂತಿ ಹೆಗ್ಡೆ, ಶಿಕ್ಷಕೇತರ ಸಿಬ್ಬಂದಿ ಮಹೇಶ್ ಎಂ.ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.