spot_img

“ಇನ್ನೂ 20 ವರ್ಷ ವಿಪಕ್ಷ ಸ್ಥಾನದಲ್ಲೇ ಇರುತ್ತೀರಿ”: ಸಂಸತ್ತಿನಲ್ಲಿ ವಿಪಕ್ಷಗಳಿಗೆ ಅಮಿತ್ ಶಾ ಟೀಕೆ!

Date:

spot_img

ಹೊಸದಿಲ್ಲಿ: ಲೋಕಸಭಾ ಅಧಿವೇಶನದಲ್ಲಿ ‘ಆಪರೇಷನ್ ಸಿಂಧೂರ’ ವಿಚಾರದ ಚರ್ಚೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಇನ್ನೂ 20 ವರ್ಷಗಳ ಕಾಲ ನೀವು ಅಲ್ಲೇ (ವಿಪಕ್ಷ ಸ್ಥಾನ) ಇರುತ್ತೀರಿ” ಎಂದು ಛೇಡಿಸಿದ್ದಾರೆ.

ಪಾಕಿಸ್ತಾನ ವಿರುದ್ಧದ ಕದನ ವಿರಾಮದಲ್ಲಿ ಅಮೆರಿಕದ ಪಾತ್ರವಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ನೀಡಿದ ಭರವಸೆಯ ಬಗ್ಗೆ ವಿಪಕ್ಷಗಳು ಪ್ರಶ್ನೆಗಳನ್ನು ಎತ್ತಿದಾಗ ಅಮಿತ್ ಶಾ ಕೆರಳಿದರು. “ಅವರು (ವಿರೋಧ ಪಕ್ಷ) ಭಾರತದ ವಿದೇಶಾಂಗ ಸಚಿವರ ಮೇಲೆ ನಂಬಿಕೆ ಹೊಂದಿಲ್ಲ, ಆದರೆ ಬೇರೆ ಯಾವುದೋ ದೇಶದ ಮೇಲೆ ನಂಬಿಕೆ ಹೊಂದಿದ್ದಾರೆ ಎಂಬುದರ ಬಗ್ಗೆ ನನಗೆ ಆಕ್ಷೇಪವಿದೆ” ಎಂದು ಶಾ ಹೇಳಿದರು.

‘ಪಕ್ಷದಲ್ಲಿ ವಿದೇಶಿಯರ ಪ್ರಾಮುಖ್ಯತೆ’ ಬಗ್ಗೆ ಟೀಕೆ

“ಅವರ ಪಕ್ಷದಲ್ಲಿ ವಿದೇಶಿಯರ ಪ್ರಾಮುಖ್ಯತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ಇದರರ್ಥ ಅವರ ಪಕ್ಷದ ಎಲ್ಲಾ ವಿಷಯಗಳನ್ನು ಸದನದಲ್ಲಿ ಹೇರಬೇಕು ಎಂದಲ್ಲ. ಇದೇ ಕಾರಣಕ್ಕಾಗಿ ಅವರು ಅಲ್ಲಿ ಕುಳಿತಿದ್ದಾರೆ (ವಿರೋಧ ಪಕ್ಷದಲ್ಲಿ ಮುಂದಿನ 20 ವರ್ಷಗಳ ಕಾಲ ಅಲ್ಲೇ ಕುಳಿತುಕೊಳ್ಳುತ್ತಾರೆ” ಎಂದು ಗೃಹ ಸಚಿವರು ನೇರವಾಗಿ ಟೀಕಿಸಿದರು.

ಸಂಸತ್ತಿನಲ್ಲಿ ‘ಆಪರೇಷನ್ ಸಿಂಧೂರ’ ಕುರಿತ ಚರ್ಚೆಯ ಸಂದರ್ಭದಲ್ಲಿ ಪಹಲ್ಗಾಮ್ ದಾಳಿಗೆ ಭಾರತದ ನಿಲುವು ಮತ್ತು ಪ್ರತಿಕ್ರಿಯೆಯ ಬಗ್ಗೆ ಜೈಶಂಕರ್ ಮಾತನಾಡುತ್ತಿದ್ದರು. ಆದರೆ ಪ್ರತಿಪಕ್ಷಗಳು ತಮ್ಮ ಭಾಷಣದ ಸಮಯದಲ್ಲಿ ಹಲವಾರು ಬಾರಿ ಅಡ್ಡಿಪಡಿಸಿದಾಗ, ಅಮಿತ್ ಶಾ ಮಧ್ಯಪ್ರವೇಶಿಸಿ, “ನಿಮ್ಮ ಸ್ವಂತ ವಿದೇಶಾಂಗ ಸಚಿವರನ್ನು ನೀವು ನಂಬುವುದಿಲ್ಲವೇ?” ಎಂದು ವಿರೋಧ ಪಕ್ಷದ ನಾಯಕರ ಗದ್ದಲದ ನಡುವೆ ಪ್ರಶ್ನಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

ಈ ಮಾಹಿತಿ ಶಿಬಿರದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಭಾಗವಹಿಸಲಿದ್ದು, ಉದ್ಯೋಗ ಮೇಳದ ಸಮಗ್ರ ವಿವರಗಳನ್ನು ನೀಡಲಿದ್ದಾರೆ.

ಮಂಗಳೂರು: ಔಷಧಿಯೆಂದು ಇಲಿಪಾಷಾಣ ಸೇವಿಸಿದ್ದ ಹೆಡ್ ಕಾನ್ಸ್‌ಟೇಬಲ್ ದುರ್ಮರಣ!

ಔಷಧಿಯೆಂದು ತಪ್ಪಾಗಿ ಭಾವಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಧರ್ಮಸ್ಥಳ : ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಬಳಕೆಯಾದರೂ ಸಿಗದ ಕಳೇಬರ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ,ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಯಂತ್ರವನ್ನು ಬಳಸಿದರೂ ಇದುವರೆಗೆ ಕಳೇಬರ ಪತ್ತೆಯಾಗಿಲ್ಲ.

ಮರವಂತೆಯಲ್ಲಿ ಮಳೆಗಾಲದಲ್ಲೂ ಅಪಾಯಕಾರಿ ಬೋಟಿಂಗ್: ಪ್ರವಾಸಿಗರ ಪ್ರಾಣದೊಂದಿಗೆ ಚೆಲ್ಲಾಟ!

ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.