spot_img

ಇಂದ್ರಾಳಿ ರೈಲು ನಿಲ್ದಾಣದ ಬಳಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಣೆ

Date:

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದ ಹೊರವಲಯದ ಪಾದಚಾರಿ ಮಾರ್ಗದಲ್ಲಿ ಮಂಗಳವಾರ ನಸುಕಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಒಬ್ಬ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯ ಆಟೋ ಚಾಲಕರು ರಕ್ಷಿಸಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕ ಅರೆಬೆತ್ತಲೆ ಸ್ಥಿತಿಯಲ್ಲಿ, ಸೊಂಟದ ಪಟ್ಟಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದುದು ಕಂಡುಬಂದಿದೆ. ಸಾರ್ವಜನಿಕರು ತಕ್ಷಣ ಅವನ ಪ್ರಾಣ ಉಳಿಸಿದ್ದಾರೆ. ಯುವಕನ ಬಾಯಿ ಮತ್ತು ಮೂಗಿನಿಂದ ರಕ್ತ ಸ್ರವಿಸುತ್ತಿದ್ದುದು ಗಮನಕ್ಕೆ ಬಂದಿದ್ದು ,ಆತನು ಮಾದಕದ್ರವ್ಯಗಳನ್ನು ಸೇವಿಸಿರಬಹುದೆಂದು ಶಂಕಿಸಲಾಗಿದೆ.

ಯುವಕನು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ ಆತನ ಗುರುತು ಇನ್ನೂ ತಿಳಿದುಬಂದಿಲ್ಲ. ಆತನ ವಾರಸುದಾರರು ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ-ಪಡುಬಿದ್ರೆ ರಸ್ತೆಯಲ್ಲಿ ಭೀಕರ ಅಪಘಾತ: ರಿಕ್ಷಾ-ಬಸ್ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

ಕಾರ್ಕಳ-ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ವೆ ಕಣಜಾರ್ ಕಟ್ಟೆ ಬಳಿ ರಿಕ್ಷಾ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶ್ರೀ ಮೂಕಾಂಬಿಕೆಗೆ ನವರತ್ನ ಖಚಿತ ಚಿನ್ನದ ಮುಖವಾಡ ಸಮರ್ಪಣೆ: 45 ವರ್ಷದ ಕನಸು ನನಸಾದ ಕ್ಷಣ

ದೇವಿಯ ಅನುಗ್ರಹದ ಕನಸಿಗೆ ನೈಜ ರೂಪ ನೀಡಿದ ಭಕ್ತರು, ಸುಮಾರು ₹90 ಲಕ್ಷ ಮೌಲ್ಯದ ನವರತ್ನ ಕಲ್ಲುಗಳೊಂದಿಗೆ ಅಲಂಕೃತವಾದ 1 ಕೆ.ಜಿ ತೂಕದ ಚಿನ್ನದ ಮುಖವಾಡವನ್ನು ಬುಧವಾರ ಶ್ರೀ ಮೂಕಾಂಬಿಕಾ ದೇವಿಗೆ ಸಮರ್ಪಿಸಿದ್ದಾರೆ.

ಆರ್‌ಸಿಬಿ ಸನ್ಮಾನ ಕಾರ್ಯಕ್ರಮ: ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ನಾನೇ ಎಂದ ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಜೂನ್ 4ರಂದು ನಡೆದ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ನಾನೇ ಎಂದು ಘೋಷಿಸಿದ್ದಾರೆ.

ಅಂಬಲಪಾಡಿ ವಿಶು ಶೆಟ್ಟಿಯವರಿಂದ ಧಾರಾಕಾರ ಮಳೆಯಲ್ಲಿ ನೆನೆಯುತ್ತಾ ಕುಳಿತಿದ್ದ ಮಹಿಳೆಯ ರಕ್ಷಣೆ

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದೆಂದೂರ್ ಕಟ್ಟೆ ಬಳಿ ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆಯೊಬ್ಬರು ಧಾರಾಕಾರ ಮಳೆಯಲ್ಲಿ ನೆನೆಯುತ್ತಾ ರಸ್ತೆ ಬದಿಯಲ್ಲಿ ದೀರ್ಘ ಸಮಯ ಕುಳಿತಿದ್ದವರನ್ನು ಸ್ಥಳೀಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ತಕ್ಷಣ ಸ್ಪಂದಿಸಿ ರಕ್ಷಣೆ ಮಾಡಿರುವ ಮಾನವೀಯ ಘಟನೆ ಬೆಳಕಿಗೆ ಬಂದಿದೆ.