spot_img

ಇನ್ಮುಂದೆ ಹಲಸಿನ ಬೀಜ ಬಿಸಾಡಬೇಡಿ! ಆರೋಗ್ಯಕ್ಕೆ ಬೆಟ್ಟದಷ್ಟು ಲಾಭ ನೀಡುವ ಗುಣವಿದೆ

Date:

ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.

ಹಲಸಿನ ಬೀಜಗಳಲ್ಲಿ ಇರುವ ಪ್ರಮುಖ ಆರೋಗ್ಯ ಲಾಭಗಳು:

🔹 ಕಬ್ಬಿಣಾಂಶದ ಭಂಡಾರ:
ಹಲಸಿನ ಬೀಜಗಳು ಕಬ್ಬಿಣದಿಂದ ಸಮೃದ್ಧವಾಗಿದ್ದು, ಅನಿಮಿಯಾ ನಿವಾರಣೆಗೆ ಸಹಕಾರಿಯಾಗಿದೆ. ದೇಹದಲ್ಲಿ ರಕ್ತದ ಹೆಪ್ಪುಗಟ್ಟುವಿಕೆಯನ್ನು ತಡೆಯುವುದಲ್ಲದೇ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

🔹 ಜೀರ್ಣಕ್ರಿಯೆ ಸುಧಾರಣೆ:
ನಾರಿನ ಅಂಶ ಹೆಚ್ಚಿರುವ ಈ ಬೀಜಗಳು ಅಜೀರ್ಣತೆ, ಗ್ಯಾಸ್ಟ್ರಿಕ್ ಹಾಗೂ ಮಲಬದ್ಧತೆಯಂತಹ ಸಮಸ್ಯೆಗಳಿಗೆ ರಾಮಬಾಣ. ವಿಶೇಷವಾಗಿ ಹಿರಿಯ ನಾಗರಿಕರ ಜೀರ್ಣ ವ್ಯವಸ್ಥೆಗೆ ಸಹಾಯಕರವಾಗಿದೆ.

🔹 ಕಣ್ಣಿನ ಆರೋಗ್ಯ:
ವಿಟಮಿನ್ ಎ ಅಂಶ ಇರುವುದರಿಂದ ರಾತ್ರಿ ಕುರುಡು, ಕಣ್ಣಿನ ಪೊರೆ ಸಮಸ್ಯೆ ಇತ್ಯಾದಿಗಳಿಂದ ರಕ್ಷಿಸುತ್ತದೆ. ಕಂಪ್ಯೂಟರ್, ಸ್ಮಾರ್ಟ್‌ಫೋನ್ ಬಳಸುವ ಜನರಿಗಿದು ಅಮೂಲ್ಯ ಆಹಾರ.

🔹 ರಕ್ತಸಂಚಾರ ಸುಧಾರಣೆ:
ಬೀಜಗಳಲ್ಲಿ ಇರುವ ಮ್ಯಾಂಗನೀಸ್ ಅಂಶ ರಕ್ತದ ಹೆಪ್ಪುಗಟ್ಟುವಿಕೆಯನ್ನು ತಡೆದು ಹೃದಯಾಘಾತ ಮುಂತಾದ ಸಮಸ್ಯೆಗಳನ್ನು ತಡೆಯುತ್ತದೆ.

🔹 ಲೈಂಗಿಕ ಆರೋಗ್ಯಕ್ಕೆ ಸಹಾಯ:
ಕಬ್ಬಿಣಾಂಶ ಲೈಂಗಿಕ ಆಸಕ್ತಿಯನ್ನು ಉತ್ತೇಜಿಸುತ್ತದೆ. ಹಿಂದಿನ ಕಾಲದಲ್ಲಿ ಹಲಸಿನ ಬೀಜಗಳನ್ನು ಲೈಂಗಿಕ ಅಸ್ವಸ್ಥತೆಗೆ ಔಷಧಿಯಾಗಿ ಬಳಸಿದ ದಾಖಲೆಗಳಿವೆ.

🔹 ಮಾಂಸಖಂಡಗಳು ಬಲಗೊಳ್ಳುತ್ತವೆ:
ಪ್ರೋಟೀನ್‌ಗಳಿರುವ ಈ ಬೀಜಗಳು ಶರೀರದ ಮಾಂಸಖಂಡ ಬಲವರ್ಧನೆಗೆ ಸಹಕಾರಿಯಾಗಿದ್ದು, ಶಕ್ತಿವರ್ಧಕ ಆಹಾರವಾಗಿ ಬಳಸಬಹುದು.

ಹೀಗಾಗಿ, ಹಲಸಿನ ಹಣ್ಣಿನ ರುಚಿಯ ಜೊತೆಗೆ ಬೀಜಗಳನ್ನು ಕೂಡ ಉಪಯೋಗಿಸಿ. ಬಿಸಾಡಬೇಡಿ. ಅವುಗಳಿಂದ ಹಲವಾರು ರೀತಿಯಲ್ಲಿ ಆರೋಗ್ಯದ ಲಾಭ ಪಡೆಯಬಹುದು. ಬಾಯಿಗೆ ರುಚಿ ನೀಡಿದಂತೆಯೇ ದೇಹಕ್ಕೂ ಶಕ್ತಿ ನೀಡುವ ಈ ಬೀಜಗಳು ನಿಜಕ್ಕೂ ಬೆಟ್ಟದಷ್ಟು ಲಾಭದಾಯಕ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಉಡುಪಿ: ಎರಡು ದಿನಗಳ ರೋಚಕ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸೆರೆ – ಗ್ರಾಮಸ್ಥರಿಗೆ ನಿಟ್ಟುಸಿರು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.

ಉದಯ್ ಶೆಟ್ಟಿ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸೇರಿದಂತೆ ಇತರ ಸೇವಾ ಕಾರ್ಯಕ್ರಮಗಳ ಆಯೋಜನೆ

ಕಾಂಗ್ರೆಸ್ ನಾಯಕರಾಗಿರುವ ಮಾನ್ಯ ಶ್ರೀ ಉದಯ್ ಶೆಟ್ಟಿ ಮುನಿಯಾಲುರವರ ಹುಟ್ಟುಹಬ್ಬದ ಪ್ರಯುಕ್ತ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಬಂಡೀಮಠ ಮೂಡು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.