spot_img

ಉಪ್ಪಿನ ಅತಿಯಾದ ಸೇವನೆ ಅಪಾಯಕಾರಿ !

Date:

ಆಹಾರಕ್ಕೆ ರುಚಿ ನೀಡುವ ಉಪ್ಪು, ಅತಿಯಾದರೆ ಆರೋಗ್ಯಕ್ಕೆ ಮಾರಕವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಸ್ಫೋಟಕ ವರದಿಯೊಂದನ್ನು ಬಹಿರಂಗಪಡಿಸಿದೆ. ಉಪ್ಪಿನ ಅತಿಯಾದ ಸೇವನೆಯು ಭಾರತದ ಹೆಚ್ಚಿನ ಜನಸಂಖ್ಯೆಯನ್ನು ಸಾಂಕ್ರಾಮಿಕ ರೋಗಗಳ ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು WHO ಎಚ್ಚರಿಸಿದೆ.

ಅಧಿಕ ರಕ್ತದೊತ್ತಡ, ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯು ಸೇರಿದಂತೆ ಹಲವು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಅತಿಯಾದ ಉಪ್ಪು ಸೇವನೆಯೇ ಪ್ರಮುಖ ಕಾರಣ ಎಂದು ವರದಿಯಲ್ಲಿ ತಿಳಿಸಲಾಗಿದೆ. WHO ಮಾರ್ಗಸೂಚಿಗಳ ಪ್ರಕಾರ, ವಯಸ್ಕರೊಬ್ಬರು ದಿನಕ್ಕೆ ಗರಿಷ್ಠ 5 ಗ್ರಾಂ ಉಪ್ಪನ್ನು ಮಾತ್ರ ಸೇವಿಸಬೇಕು. ಆದರೆ, ಭಾರತದಲ್ಲಿ ಅದರಲ್ಲೂ ನಗರ ಪ್ರದೇಶಗಳಲ್ಲಿ ವಾಸಿಸುವ ವ್ಯಕ್ತಿಗಳು ದಿನಕ್ಕೆ ಸರಾಸರಿ 9.2 ಗ್ರಾಂ ಉಪ್ಪನ್ನು ಸೇವಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಕೂಡ ಸರಾಸರಿ 5.6 ಗ್ರಾಂ ಗಿಂತ ಹೆಚ್ಚು ಉಪ್ಪನ್ನು ಸೇವಿಸಲಾಗುತ್ತಿದೆ, ಇದು ಸೂಚಿತ ಪ್ರಮಾಣಕ್ಕಿಂತ ಹೆಚ್ಚಾಗಿದೆ.

ಉಪ್ಪು ಸೇವನೆಯಲ್ಲಿ ಕೇವಲ ಸಣ್ಣ ಬದಲಾವಣೆ ಮಾಡುವುದರಿಂದಲೂ ರಕ್ತದೊತ್ತಡವನ್ನು ಸುಮಾರು 7/4 mmHg ರಷ್ಟು ಕಡಿಮೆ ಮಾಡಬಹುದು ಎಂದು ವೈದ್ಯರು ಹೇಳುತ್ತಾರೆ. ಪ್ಯಾಕ್ ಮಾಡಿದ ತಿಂಡಿಗಳು, ನೂಡಲ್ಸ್ ಮತ್ತು ಫಾಸ್ಟ್ ಫುಡ್‌ಗಳ ಸೇವನೆಯನ್ನು ಕಡಿಮೆ ಮಾಡುವಂತೆ ಹಾಗೂ ಬೇಯಿಸಿದ ಆಹಾರದಲ್ಲಿ ಉಪ್ಪಿನ ಪ್ರಮಾಣವನ್ನು ಕಡಿಮೆ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಉಪ್ಪು ಆಹಾರಕ್ಕೆ ಅತ್ಯಗತ್ಯ ಅಂಶವಾಗಿದ್ದರೂ, ಹೆಚ್ಚು ಉಪ್ಪು ಸೇವಿಸುವುದರಿಂದ ಹಲವಾರು ಸಮಸ್ಯೆಗಳು ಉಂಟಾಗಬಹುದು. ಬಿಳಿ ಉಪ್ಪು, ಕಪ್ಪು ಉಪ್ಪು, ಕಲ್ಲು ಉಪ್ಪು ಮತ್ತು ಗುಲಾಬಿ ಉಪ್ಪು ಸೇರಿದಂತೆ ಯಾವುದೇ ವಿಧದ ಉಪ್ಪಿನ ಅತಿಯಾದ ಸೇವನೆಯು ದೇಹಕ್ಕೆ ಒಳ್ಳೆಯದಲ್ಲ ಎಂದು WHO ಕಳವಳ ವ್ಯಕ್ತಪಡಿಸಿದೆ. ಹೆಚ್ಚು ಉಪ್ಪಿಲ್ಲದ ಆಹಾರವನ್ನು ಸೇವಿಸಲು ಸಾಧ್ಯವಿಲ್ಲ ಎಂಬ ಅಭ್ಯಾಸವು ಒಂದು ಹಂತದಲ್ಲಿ ದೊಡ್ಡ ಅಪಾಯಕ್ಕೆ ಕಾರಣವಾಗಬಹುದು ಎಂದು ಸಂಸ್ಥೆ ಎಚ್ಚರಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.