spot_img

ಪ್ರಯಾಣದ ವೇಳೆ ವಾಂತಿ ಸಮಸ್ಯೆಗೆ ಇಲ್ಲಿದೆ ಸರಳ ಮನೆಮದ್ದುಗಳು

Date:

spot_img
spot_img

ನೀವು ಪ್ರಯಾಣ ಮಾಡುವಾಗ ವಾಂತಿ ಅಥವಾ ವಾಕರಿಕೆ ಸಮಸ್ಯೆ ಎದುರಿಸುವುದು ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ, ವಾಹನದ ಚಲನೆ ಮತ್ತು ದೇಹದ ಸಮತೋಲನದಲ್ಲಿನ ವ್ಯತ್ಯಾಸ. ಇದು ಪ್ರಯಾಣದ ಆನಂದವನ್ನು ಹಾಳು ಮಾಡುತ್ತದೆ. ಆದರೆ, ಕೆಲವು ಸರಳ ಮನೆಮದ್ದುಗಳನ್ನು ಅನುಸರಿಸುವ ಮೂಲಕ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

ವಾಕರಿಕೆ ಮತ್ತು ವಾಂತಿಗೆ ಪರಿಣಾಮಕಾರಿ ಪರಿಹಾರಗಳು

  • ಶುಂಠಿ: ಸ್ವಲ್ಪ ಶುಂಠಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳಿ ಅಥವಾ ಶುಂಠಿಯನ್ನು ನೀರಿನಲ್ಲಿ ಕದಿಸಿ ಕುಡಿಯುವುದರಿಂದ ವಾಂತಿ ನಿಯಂತ್ರಣಕ್ಕೆ ಬರುತ್ತದೆ.
  • ನಿಂಬೆ ಮತ್ತು ಉಪ್ಪು: ನಿಂಬೆಹಣ್ಣನ್ನು ಬಾಯಿ ಹಾಕಿ ಸವಿಯುವುದರಿಂದ ಅಥವಾ ಉಪ್ಪು ಮತ್ತು ಸಕ್ಕರೆ ಬೆರೆಸಿದ ನಿಂಬೆ ನೀರನ್ನು ಸ್ವಲ್ಪ ಸ್ವಲ್ಪವೇ ಕುಡಿಯುವುದರಿಂದ ಪರಿಹಾರ ಸಿಗುತ್ತದೆ.
  • ಲವಂಗ: ಒಂದು ಚಮಚ ಲವಂಗವನ್ನು ಒಂದು ಕಪ್ ಬಿಸಿ ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಪ್ರಯಾಣದ ವಾಂತಿಯಿಂದ ಮುಕ್ತಿ ಸಿಗುತ್ತದೆ.
  • ಸೋಂಪು: ಒಂದೆರಡು ಸೋಂಪು ಕಾಳುಗಳನ್ನು ನಿಧಾನವಾಗಿ ಜಗಿದು ತಿನ್ನುವುದು ಅಥವಾ ಸೋಂಪು ನೀರನ್ನು ಕುಡಿಯುವುದು ಕೂಡ ಉತ್ತಮ ಪರಿಹಾರ.
  • ಕಿತ್ತಳೆ ಹಣ್ಣು: ಪ್ರಯಾಣದ ಸಮಯದಲ್ಲಿ ಕಿತ್ತಳೆ ಹಣ್ಣನ್ನು ತಿನ್ನುವುದರಿಂದ ಅಥವಾ ಕಿತ್ತಳೆ ರಸವನ್ನು ಕುಡಿಯುವುದರಿಂದ ವಾಂತಿ ಬರುವುದಿಲ್ಲ.
  • ಆಳವಾದ ಉಸಿರಾಟ: ವಾಕರಿಕೆಯಾದಾಗ ಗಾಡಿ ನಿಲ್ಲಿಸಿ ಆಳವಾದ ಉಸಿರು ತೆಗೆದುಕೊಳ್ಳಿ. ಈ ವಿಧಾನವು ಮಾನಸಿಕವಾಗಿ ಮತ್ತು ದೈಹಿಕವಾಗಿ ನಿಮಗೆ ಹಿತ ನೀಡುತ್ತದೆ.
  • ನೀರು ಕುಡಿಯುವುದು: ವಾಂತಿಯಾದಾಗ ಒಮ್ಮೆಲೆ ಹೆಚ್ಚು ನೀರು ಕುಡಿಯದೆ, ಸ್ವಲ್ಪ ಸ್ವಲ್ಪವೇ ನೀರನ್ನು ಕುಡಿಯಿರಿ.

ಈ ಮನೆಮದ್ದುಗಳು ತಾತ್ಕಾಲಿಕ ಪರಿಹಾರವನ್ನು ನೀಡಬಹುದು. ಜೊತೆಗೆ, ಪ್ರಯಾಣದ ಸಮಯದಲ್ಲಿ ಸ್ವಚ್ಛವಾದ ಆಹಾರವನ್ನು ಸೇವಿಸುವುದು ಮತ್ತು ಅನಗತ್ಯವಾಗಿ ಭಾರೀ ಆಹಾರವನ್ನು ತಿನ್ನುವುದನ್ನು ತಪ್ಪಿಸುವುದು ಮುಖ್ಯ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್: 2025-26 ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್ 2025-26 ರ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ .

ವೈದ್ಯೆ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ: 6 ತಿಂಗಳ ನಂತರ ವೈದ್ಯ ಪತಿ ಡಾ. ಮಹೇಂದ್ರರೆಡ್ಡಿ ಬಂಧನ

ವೈದ್ಯೆಯಾಗಿದ್ದ ಪತ್ನಿಗೆ ಇಂಜೆಕ್ಷನ್ ನೀಡಿ ಹತ್ಯೆಗೈದಿದ್ದ ಆರೋಪಿ ಡಾಕ್ಟರ್‌ ಈಗ ಪೊಲೀಸರ ಅತಿಥಿಯಾಗಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿದ್ದ ಸಹೋದರಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಅಪಘಾತ: ಎಂಬಿಬಿಎಸ್ ವಿದ್ಯಾರ್ಥಿನಿ ದುರ್ಮರಣ

ಬೇತೂರುಪಾರ ಸಮೀಪ ಬುಧವಾರ ಬೆಳಿಗ್ಗೆ ನಡೆದ ಆಘಾತಕಾರಿ ಅಪಘಾತದಲ್ಲಿ, ಖಾಸಗಿ ಆಸ್ಪತ್ರೆಯ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ, ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಮಹಿಮಾ (19) ಮೃತಪಟ್ಟಿದ್ದಾರೆ.

ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕರ ಕುಟುಂಬಕ್ಕೆ ನೆರವು: ಸಿಎಂ ಜೊತೆ ಚರ್ಚಿಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕರ ಕುಟುಂಬಕ್ಕೆ ನೆರವು ನೀಡುವ ಬಗ್ಗೆ ಸಿಎಂ ಜೊತೆ ಚರ್ಚಿಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.