ನಿತ್ಯ ಪುಷ್ಪದ ಆರೋಗ್ಯಕರ ಪ್ರಯೋಜನಗಳನ್ನು ತಿಳಿಯೋಣ…

Date:

spot_img

ಮನೆಯಂಗಳದಲ್ಲಿ ಮನಸೂರೆಗೊಳ್ಳುವಂತೆ ಅರಳುವ ಪುಟ್ಟ ಗಿಡವಾದ ನಿತ್ಯ ಪುಷ್ಪ ಅಥವಾ ಸದಾ ಪುಷ್ಪ ಕೇವಲ ಪೂಜೆಗೆ ಮಾತ್ರವಲ್ಲ, ಆರೋಗ್ಯ ವೃದ್ಧಿಗೂ ಅಷ್ಟೇ ಮಹತ್ವ ಪಡೆದಿದೆ. ತಿಳಿ ಗುಲಾಬಿ ಮತ್ತು ಬಿಳಿಯ ಬಣ್ಣದಲ್ಲಿ ಅರಳುವ ಈ ಹೂವು (ಇಂಗ್ಲಿಷ್‌ನಲ್ಲಿ ‘ಮದಗಾಸ್ಕರ್‌ ಪೆರಿವಿಂಕಲ್‌’ ಎಂದೂ, ಹಿಂದಿಯಲ್ಲಿ ‘ಸದಾಬಹಾರ್‌’ ಎಂದೂ ಕರೆಯಲ್ಪಡುತ್ತದೆ) ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಆಯುರ್ವೇದದಲ್ಲಿಯೂ ಉಲ್ಲೇಖಿಸಲ್ಪಟ್ಟಿರುವ ಈ ಸಸ್ಯದ ಪ್ರಮುಖ ಆರೋಗ್ಯಕರ ಪ್ರಯೋಜನಗಳು ಇಲ್ಲಿವೆ:

ನಿತ್ಯ ಪುಷ್ಪದ ಆರೋಗ್ಯಕರ ಪ್ರಯೋಜನಗಳು

  • ಕ್ಯಾನ್ಸರ್‌ಗೆ ತಡೆ ನೀಡುತ್ತದೆ: ನಿತ್ಯ ಪುಷ್ಪದ ಬೇರನ್ನು ಕ್ಯಾನ್ಸರ್ ಜೀವಕೋಶಗಳ ವಿರುದ್ಧ ಹೋರಾಡಲು ಬಳಸಲಾಗುತ್ತದೆ. ಇದರಲ್ಲಿನ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಕ್ಯಾನ್ಸರ್‌ ಜೀವಕೋಶಗಳ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತವೆ.
  • ಮಧುಮೇಹ ನಿಯಂತ್ರಣ: ರಕ್ತದಲ್ಲಿನ ಸಕ್ಕರೆಯ ಸ್ಪೈಕ್ ಅನ್ನು ನಿಯಂತ್ರಿಸಲು ಆಯುರ್ವೇದವು ನಿತ್ಯ ಪುಷ್ಪವನ್ನು ಶಿಫಾರಸು ಮಾಡುತ್ತದೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹೂವಿನ ಎಸಳಿನ ಟೀಯನ್ನು ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತದೆ.
  • ಖಿನ್ನತೆ ಮತ್ತು ಆತಂಕ ನಿವಾರಣೆ: ನಿತ್ಯ ಪುಷ್ಪದ ಬಳಕೆಯಿಂದ ಖಿನ್ನತೆ, ಆತಂಕದಂತಹ ಮಾನಸಿಕ ಅನಾರೋಗ್ಯದ ಸಮಸ್ಯೆಗಳು ನಿವಾರಣೆಯಾಗುತ್ತವೆ. ಮಾನಸಿಕವಾಗಿ ದಣಿದಿದ್ದರೆ ನಿತ್ಯ ಪುಷ್ಪ ಹೂವಿನ ಚಹಾವನ್ನು ಸೇವಿಸಿ ಅಥವಾ ಹೂವಿನ ರಸವನ್ನು ಪ್ರತಿದಿನ ಒಂದೆರಡು ಚಮಚ ಸೇವಿಸುವುದರಿಂದ ಮಾನಸಿಕವಾಗಿ ಸದೃಢರಾಗಬಹುದು.
  • ಅಧಿಕ ರಕ್ತದೊತ್ತಡಕ್ಕೆ ಪರಿಹಾರ: ಬದಲಾದ ಜೀವನಶೈಲಿಯಿಂದ ಕಾಣಿಸಿಕೊಳ್ಳುವ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ನಿತ್ಯ ಪುಷ್ಪ ಗಿಡವು ಸಹಾಯ ಮಾಡುತ್ತದೆ. ಪ್ರತಿದಿನ ಗಿಡದ ಎಲೆಗಳ ಪುಡಿಯನ್ನು ಚಿಟಿಕೆಯಷ್ಟು ಸೇವನೆ ಮಾಡುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
  • ಋತು ಚಕ್ರದ ಸಮಸ್ಯೆಗಳ ಪರಿಹಾರ: ನಿತ್ಯ ಪುಷ್ಪ ಗಿಡದ ಎಲೆಗಳನ್ನು ನೀರಿನಲ್ಲಿ ಕುದಿಸಿ ಸೇವಿಸಿದರೆ ಋತು ಚಕ್ರದ ಸಮಸ್ಯೆಗಳೂ ನಿವಾರಣೆಯಾಗುತ್ತವೆ.
  • ಚರ್ಮದ ಕಾಂತಿ ಹೆಚ್ಚಳ: ಸ್ಕಿನ್‌ ಟ್ಯಾನಿಂಗ್‌, ಕಪ್ಪು ಕಲೆಗಳು, ಮೊಡವೆಯಂತಹ ಚರ್ಮದ ಸಮಸ್ಯೆಗಳಿಗೆ ನಿತ್ಯ ಪುಷ್ಪ ಪರಿಹಾರ ನೀಡುತ್ತದೆ. ಗಿಡದ ಎಲೆಗಳನ್ನು ಒಣಗಿಸಿ ಪುಡಿ ಮಾಡಿ, ನೀರು ಸೇರಿಸಿ ಮುಖಕ್ಕೆ ಹಚ್ಚುತ್ತಾ ಬಂದರೆ ಚರ್ಮದ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿ, ಮುಖದ ಕಾಂತಿ ಕೂಡ ಹೆಚ್ಚಾಗುತ್ತದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.