spot_img

ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ: ಆರೋಗ್ಯಕ್ಕೆ ಅಪಾಯ

Date:

spot_img
spot_img

ಆರೋಗ್ಯಕ್ಕೆ ತರಕಾರಿಗಳನ್ನು ಸೇವಿಸುವುದು ಉತ್ತಮ. ಆದರೆ ಕೆಲವು ತರಕಾರಿಗಳನ್ನು ಹಸಿಯಾಗಿ ತಿನ್ನುವುದು ಹಾನಿಕರವಾಗಬಹುದು. ಕೆಲವು ತರಕಾರಿಗಳನ್ನು ಅತಿಯಾಗಿ ಬೇಯಿಸುವುದರಿಂದ ಪೋಷಕಾಂಶಗಳು ಕಡಿಮೆಯಾದರೂ, ಕೆಲವವನ್ನು ಸರಿಯಾಗಿ ಬೇಯಿಸದೆ ಸೇವಿಸುವುದು ಅಪಾಯಕಾರಿ. ಟೊಮೆಟೊ, ಕ್ಯಾರೆಟ್, ಈರುಳ್ಳಿ, ಸೌತೆಕಾಯಿಯಂತಹ ತರಕಾರಿಗಳನ್ನು ಹಸಿಯಾಗಿ ತಿನ್ನಬಹುದು, ಆದರೆ ಈ ಕೆಳಗಿನ ತರಕಾರಿಗಳನ್ನು ಮಾತ್ರ ಹಸಿಯಾಗಿ ತಿನ್ನಬೇಡಿ.

1. ಬದನೆಕಾಯಿ (Eggplant) ಬದನೆಕಾಯಿಯನ್ನು ಯಾವಾಗಲೂ ಚೆನ್ನಾಗಿ ಬೇಯಿಸಿ ತಿನ್ನಬೇಕು. ಬದನೆಕಾಯಿಯ ಬೀಜಗಳಲ್ಲಿ ಲಾಡಿಹುಳು (Tapeworm) ಮೊಟ್ಟೆಗಳಿರಬಹುದು. ಇದನ್ನು ಬೇಯಿಸಿದಾಗ ಮಾತ್ರ ಆ ಮೊಟ್ಟೆಗಳು ನಾಶವಾಗುತ್ತವೆ.

2. ಎಲೆಕೋಸು (Cabbage) ಎಲೆಕೋಸನ್ನು ಹಸಿಯಾಗಿ ತಿನ್ನುವುದು ತುಂಬಾ ಅಪಾಯಕಾರಿ. ಏಕೆಂದರೆ ಇದರಲ್ಲಿ ಅತಿ ಹೆಚ್ಚು ಲಾಡಿಹುಳುಗಳು ಮತ್ತು ಅವುಗಳ ಮೊಟ್ಟೆಗಳು ಇರುತ್ತವೆ. ಇದರ ಜೊತೆಗೆ ಕ್ರಿಮಿ-ಕೀಟಗಳೂ ಇರಬಹುದು. ಎಲೆಕೋಸನ್ನು ತಿನ್ನುವ ಮುನ್ನ ಬಿಸಿ ನೀರಿನಲ್ಲಿ ಚೆನ್ನಾಗಿ ಬೇಯಿಸಿ ಬಳಿಕ ಅದನ್ನು ಬಳಸಬೇಕು.

3. ಸೊಪ್ಪಿನ ತರಕಾರಿಗಳು (Greens) ಕೆಸುವಿನ ಎಲೆ, ಪಾಲಕ್ ಮತ್ತು ಬಸಳೆ ಸೊಪ್ಪನ್ನು ಹಸಿಯಾಗಿ ತಿನ್ನಬಾರದು. ಅವುಗಳನ್ನು ಉಪಯೋಗಿಸುವ ಮುನ್ನ ಬಿಸಿನೀರಿನಲ್ಲಿ ಬೇಯಿಸಿ ಬಳಸಬೇಕು. ಇದರಿಂದ ಅವುಗಳಲ್ಲಿರುವ ಅಂತಹ ಹಾನಿಕಾರಕ ಅಂಶಗಳು ನಾಶವಾಗುತ್ತವೆ.

4. ದೊಣ್ಣೆ ಮೆಣಸಿನಕಾಯಿ (Capsicum) ಕ್ಯಾಪ್ಸಿಕಂ ಅಥವಾ ದೊಣ್ಣೆ ಮೆಣಸಿನಕಾಯಿಯನ್ನು ಬಳಸುವ ಮೊದಲು ಅದರ ಕಿರೀಟ ಭಾಗವನ್ನು ತೆರೆದು ಬೀಜಗಳನ್ನು ತೆಗೆಯಬೇಕು. ನಂತರ ಅದನ್ನು ಬಿಸಿನೀರಿನಲ್ಲಿ ಮುಳುಗಿಸುವುದು ಉತ್ತಮ. ಏಕೆಂದರೆ ಕ್ಯಾಪ್ಸಿಕಂ ಬೀಜಗಳಲ್ಲಿ ಲಾಡಿಹುಳುವಿನ ಮೊಟ್ಟೆಗಳಿರುವ ಸಾಧ್ಯತೆ ಇದೆ.

ಈ ಮುನ್ನೆಚ್ಚರಿಕೆಗಳನ್ನು ಅನುಸರಿಸಿದರೆ, ತರಕಾರಿಗಳಿಂದ ಗರಿಷ್ಠ ಪ್ರಯೋಜನ ಪಡೆಯುವ ಜೊತೆಗೆ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.