ಧಾರ್ಮಿಕ ಕ್ಷೇತ್ರದ ಬಗ್ಗೆ ಯಾರೇ ಒಳ್ಳೆಯ ಮಾತುಗಳನ್ನಾಡಿದರೂ ಅವರ ಚಾರಿತ್ರ್ಯಹರಣ ಮಾಡುವ ಮೂಲಕ ಬಾಯಿ ಮುಚ್ಚಿಸುವ ಷಡ್ಯಂತ್ರ ರೂಪಿಸುತ್ತಿರುವ ಅಪಾಯಕಾರಿ ರೌಡಿ ಮನಸ್ಥಿತಿಯನ್ನು ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸಿ ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.