ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಉಡುಪಿಯವರು, ಅನಾಮಿಕ ವ್ಯಕ್ತಿಯನ್ನು ಬಳಸಿಕೊಂಡು ಗಿರೀಶ್ ಮಟ್ಟೆನ್ನವರ, ಮಹೇಶ ಶೆಟ್ಟಿ ತಿಮರೋಡಿ ಹಾಗೂ ಜಯಂತ ಟಿ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಹೆಸರಿಗೆ ಕಳಂಕ ತರುತ್ತಿರುವ ನಿಟ್ಟಿನಲ್ಲಿ ಇವರ ಒಳಸಂಚಿನ ವಿರುದ್ಧ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾಧಿಕಾರಿಗಳಲ್ಲಿ ದೂರು ನೀಡಿದ್ದಾರೆ.
ಧರ್ಮ ಮತ್ತು ದೇವರ ವಿಷಯದಲ್ಲಿ ಜನರ ನಂಬಿಕೆಗಳಿಗೆ ಘಾಸಿ ಮಾಡುವ ಷಡ್ಯಂತ್ರವನ್ನು ದೇಶದ ಒಳಗೆ ಹಾಗೂ ಹೊರಗಿನ ಕೆಲವು ಶಕ್ತಿಗಳು ನಡೆಸುತ್ತಿವೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಟೀಕಿಸಿದ್ದಾರೆ.
ಧರ್ಮಸ್ಥಳದಲ್ಲಿ ಅನಾಮಿಕ ದೂರಿನ ಮೇರೆಗೆ ಶವಗಳ ಶೋಧ ನಡೆಸುತ್ತಿದ್ದ ಎಸ್ಐಟಿ ತಂಡ ಕಾರ್ಯಾಚರಣೆ ಮುಗಿಸಿ ಹಿಂದಿರುಗಿದ ಬಳಿಕ, ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು.