ಶ್ರೀ ಗುರು ಪೂರ್ಣಿಮಾ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಉಡುಪಿ ನಗರಾಧ್ಯಕ್ಷ ಶ್ರೀವತ್ಸರವರ ನೇತೃತ್ವದಲ್ಲಿ ಹಿರಿಯ ಯಕ್ಷಗಾನ ಕಲಾವಿದ, ಖ್ಯಾತ ಯಕ್ಷ ಗುರು, ಉಡುಪಿಯ 'ಯಕ್ಷ ಸಂಜೀವ ಯಕ್ಷಗಾನ ಕೇಂದ್ರ'ದ ಮುಖ್ಯಸ್ಥರಾದ ಬನ್ನಂಜೆ ಸಂಜೀವ ಸುವರ್ಣ ಅವರನ್ನು ಅವರ ನಿವಾಸದಲ್ಲಿ ಗೌರವಿಸಿ ಗುರು ವಂದನೆ ಸಲ್ಲಿಸಲಾಯಿತು.
ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ ಸಿ.ಎಸ್.ಇ.ಇ.ಟಿ(ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್)ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದು, ಸಾಧಕ 28 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು.