ಭಾರತದ ವಾಯುಪಡೆಯ 'ಆಪರೇಷನ್ ಸಿಂದೂರ' ಕಾರ್ಯಾಚರಣೆಯ ಬಳಿಕ, ಭಾರತದ ಬಹುಬೇಡಿಕೆಯ ಉಗ್ರ ಹಾಗೂ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷ
ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯಂಕರ ಉಗ್ರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆಯು ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಮತ್ತು ಪಾಕಿಸ್ತಾನದ ಒಳನಾಡಿನ ಉಗ್ರ ನೆಲೆಗಳ ಮೇಲೆ ಸ್ಪೋಟಕ-ಸಜ್ಜುಡಿದ ಡ್ರೋನ್ಗಳು ಮತ್ತು ನಿಖರ ಕ್ಷಿಪಣಿ ದಾಳಿ ನಡೆಸಿದೆ. 'ಆಪರೇಷನ್ ಸಿಂಧೂರ್' ಎಂಬ ಹೆಸರಿನ ಈ ಕಾರ್ಯಾಚರಣೆಯಲ್ಲಿ ಕೋಟ್ಲಿ, ಬಹ್ವಲ್ಪುರ್, ಮುಜಫರಾಬಾದ್ ಮತ್ತು ಮುರಿಡ್ಕೆ ಪ್ರದೇಶಗಳಲ್ಲಿರುವ ಒಟ್ಟು 9 ಉಗ್ರ ಅಡಗುತಾಣಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ.