ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ರಾಷ್ಟ್ರೀಯ ತರಬೇತುದಾರ ಶ್ರೀ ದೀಪಕ್ ರಾಜ್ ಅವರು ಜೆ.ಸಿ.ಐ ಕಾರ್ಕಳದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಎನ್.ಎಸ್.ಎಸ್ ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಂ ಮಾತನಾಡಿದರು.