ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿಗೆ ಸಹಾಯಕ ಪ್ರಾಧ್ಯಾಪಕಿಯಾಗಿ ಸ್ಥಳ ನಿಯುಕ್ತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶ್ರೀಮತಿ ಪೂರ್ಣಿಮಾ ಕೆ ಇವರನ್ನು ಈ ದಿನ ಆತ್ಮೀಯವಾಗಿ ಸನ್ಮಾನಿಸಲಾಯಿತು.
04-09-2025 ರಂದು ಡಾ.ಎನ್.ಎಸ್ .ಎ.ಎಮ್ ಪ್ರಥಮದರ್ಜೆ ಕಾಲೇಜು, ನಿಟ್ಟೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಐಕ್ಯೂಎಸಿ ಕೋಶವು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಆಶ್ರಯದಲ್ಲಿ ರಾಣಿ ಅಬ್ಬಕ್ಕ @500 ಪ್ರೇರಣದಾಯಿ ಉಪನ್ಯಾಸ ಮಾಲಿಕೆಯ 41 ನೇ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಾರ್ಕಳ, S N V ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.