ಆಗಸ್ಟ್ 10ರಂದು ಶಿವಮೊಗ್ಗದಲ್ಲಿ ನಡೆದ 'ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾಕೂಟ'ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ತ್ವಿಷಾ ಕುಂದರ್ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಸೋಮವಾರ ರಕ್ಷಾ ಬಂಧನ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ರಾಖಿ ಕಟ್ಟಿ ಶುಭ ಹಾರೈಸಲಾಯಿತು.
ರಾಷ್ಟ್ರೀಯ ತರಬೇತುದಾರ ಶ್ರೀ ದೀಪಕ್ ರಾಜ್ ಅವರು ಜೆ.ಸಿ.ಐ ಕಾರ್ಕಳದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.