ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್.) ಹಿರಿಯ ಸ್ವಯಂಸೇವಕರು, ಕಾರ್ಕಳದ ಖ್ಯಾತ ವೈದ್ಯರು ಹಾಗೂ ಕರ್ನಾಟಕ ಕೊಂಕಣಿ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಡಾ. ಜಗದೀಶ್ ಪೈ (62) ಅವರು ನಿನ್ನೆ (ಜುಲೈ 28, 2025) ಸಾಯಂಕಾಲ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ , ಭಜನಾ ಮಂಡಳಿಗಳ ಒಕ್ಕೂಟ , ಕರಾವಳಿ ಭಜನಾ ಸಂಸ್ಕಾರ ವೇದಿಕೆ ಕಾರ್ಕಳ ತಾಲೂಕು ಇವರ ನೇತೃತ್ವದಲ್ಲಿ ದಿನಾಂಕ/27/07/2025 ಆದಿತ್ಯವಾರ ಮಧ್ಯಾಹ್ನ 2.30ಕ್ಕೆ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಬೈಲೂರು ವಲಯದ ಭಜನಾ ಮಂಡಳಿಗಳಿಗೆ ಪರಿಕರ ವಿತರಣಾ ಕಾರ್ಯಕ್ರಮ ನೆರವೇರಿತು.