ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಟ್ರಸ್ಟಿನ ಅಧ್ಯಕ್ಷ ಅವಿನಾಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ತಲುಪಿದ್ದು ಈ ಐತಿಹಾಸಿಕ ಸಾಧನೆಯನ್ನು ಕಾರ್ಕಳ ಕಾಂಗ್ರೆಸ್ ವತಿಯಿಂದ ವಿಶಿಷ್ಟವಾಗಿ ಆಚರಿಸಲಾಯಿತು.