ನಿಂಜೂರು ಗ್ರಾಮದ ಬೂತ್ ಸಂಖ್ಯೆ -63 ಬೂತ್ ಸಮಿತಿಯ ಸಭೆಯು ದಿನಾಂಕ-30/06/2025 ಸೋಮವಾರ ಸಂಜೆ ಘಂಟೆ 5.30ಕ್ಕೆ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಾನ್ಯ ಶ್ರೀ ವಿಲ್ಸನ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಬೂತ್ ಸಂಖ್ಯೆ-63 ಸಮಿತಿಯ ಸೇವಾದಳದ ಅಧ್ಯಕ್ಷರಾದ ನಿಂಜೂರು ಪಾತಾವು ಶ್ರೀ ರೋನಾಲ್ಡ್ (ರೋನಿ) ಡಿಸೋಜ ಅವರ ಹಾಲ್ ನಲ್ಲಿ ನಡೆಯಿತು.
ಯುನಿಯನ್ ಬ್ಯಾಂಕ್ ಹೆಸರಿನಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬನು ಕೆವೈಸಿ ಅಪ್ಡೇಟ್ ಮಾಡುವ ನೆಪದಲ್ಲಿ ನಿವೃತ್ತ ನರ್ಸ್ರೊಬ್ಬರ ಖಾತೆಯಿಂದ ₹5.19 ಲಕ್ಷ ಎಗರಿಸಿರುವ ಪ್ರಕರಣ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಬೆಳಕಿಗೆ ಬಂದಿದೆ.
ವಿಶ್ವ ಪರಿಸರ ದಿನದ ಪ್ರಯುಕ್ತ ಶ್ರೀ ಮಹಾಕಾಳಿ ಭಜನಾ ಮಂಡಳಿ ಮಂಗಲ್ದಿ ಮಠ ಪಳ್ಳಿ, ಕಾಮಧೇನು ಸ್ವ ಸಹಾಯ ಸಂಘ ಪಳ್ಳಿ, ಶೌರ್ಯ ವಿಪತ್ತು ಪಳ್ಳಿ ಘಟಕ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಮಂಗಲ್ದಿ ಮಠ ದೇವಸ್ಥಾನದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಶ್ರೀ ಕ್ಷೇತ್ರ ಪರ್ಪಲೆ ಗಿರಿಯ ಕಲ್ಕುಡ ದೇವಸ್ಥಾನದ ಪ್ರತಿಷ್ಠಾಪನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 200000/- ದ ಡಿಡಿ ಯನ್ನು ಕಾರ್ಕಳ ತಾಲೂಕಿನ ಯೋಜನಾಧಿಕಾರಿಯವರಾದ ಬಾಲಕೃಷ್ಣ ಹಿರಿಂಜರವರು ಕಲ್ಕುಡ ದೈವಸ್ಥಾನದ ಆಡಳಿತ ಮಂಡಳಿ ಸಮಿತಿಯವರಿಗೆ ವಿತರಿಸಿದರು.