ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 14,000ಕ್ಕೂ ಹೆಚ್ಚು ಮಕ್ಕಳು ಅಪಹರಣಕ್ಕೊಳಗಾಗಿದ್ದು, ಈ ಪೈಕಿ 1,336 ಮಕ್ಕಳ ಪ್ರಕರಣಗಳು ಇನ್ನೂ ನಿಗೂಢವಾಗಿ ಉಳಿದಿವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಧಾನ ಪರಿಷತ್ನಲ್ಲಿ ತಿಳಿಸಿದ್ದಾರೆ.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹನೀಯರಾದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ದಿನಾಂಕ 23.08.20253e ಶನಿವಾರದಂದು ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯತ್ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಶೆಡ್ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟಿಸಲು ಆಯೋಜಿಸಲಾದ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ
ಜೆಸಿಐ ಕಾರ್ಕಳ ರೂರಲ್ ವತಿಯಿಂದ ವಲಯ ನಿರ್ದೇಶಿತ ಆರೋಹಣ ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ ಇದರ ಅಂಗವಾಗಿ ಆಹಾರ - ವಿಹಾರ , ಆಚಾರ - ವಿಚಾರಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನ ಕುರಿತ ಮೊದಲ ವಿಶೇಷ ತರಬೇತಿ ಕಾರ್ಯಕ್ರಮ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು , ಕಾಬೆಟ್ಟು ಕಾರ್ಕಳ ಇಲ್ಲಿ ಯಶಸ್ವಿಯಾಗಿ ನಡೆಯಿತು.