ಮೇ 2025 ರಲ್ಲಿ ನಡೆಸಲಾದ ಲ್ಯಾಬ್ ಪರೀಕ್ಷೆಗಳಲ್ಲಿ ವಿಫಲವಾದ ಹಿನ್ನೆಲೆಯಲ್ಲಿ, ಕರ್ನಾಟಕ ಔಷಧ ನಿಯಂತ್ರಣ ಇಲಾಖೆ ಪ್ಯಾರಸಿಟಮಾಲ್ ಮಾತ್ರೆಗಳು, ಸಿರಪ್ಗಳು, ಇಂಜೆಕ್ಷನ್ಗಳು ಮತ್ತು ಪಶುವೈದ್ಯಕ ಲಸಿಕೆಗಳ ಸೇರಿದಂತೆ 15 ಉತ್ಪನ್ನಗಳ ಬಳಕೆ ಹಾಗೂ ವಿತರಣೆಗೆ ನಿಷೇಧ ಹೇರಿದೆ.
ಕ್ರಿಯೇಟಿವ್ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜರುಗಿತು.
ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಹಿರೇಬೆಟ್ಟು ಗ್ರಾಮದ ಅಂಗಡಿಬೆಟ್ಟು ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಜೂನ್ 26 ರಂದು ಸಂಜೆ 5:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಮೃತ ವ್ಯಕ್ತಿಯನ್ನು ಬೊಮ್ಮು ಜಾನು ಬೊಡೇಕರ್ ಎಂದು ಗುರುತಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಕಾರ್ಕಳ ಇದರ ಶೌರ್ಯ ವಿಪತ್ತು ನಿರ್ವಹಣಾ ಪಳ್ಳಿ ಘಟಕದ ವತಿಯಿಂದ "ಪರಿಸರ ಮಾಹಿತಿ ಮತ್ತು ಗಿಡ ನಾಟಿ" ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಪಳ್ಳಿಯಲ್ಲಿ ನಡೆಸಲಾಯಿತು.
ಉಡುಪಿಯ ನೂತನ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿರುವ ಹರಿರಾಮ್ ಶಂಕರ್ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಮಹೇಶ್ ಮರ್ಣೆಯವರು ಅಶ್ವತ್ಥ ಎಲೆಯಲ್ಲಿ ಸ್ವಯಂ ರಚಿಸಿದ ಭಾವಚಿತ್ರವೊಂದನ್ನು ಎಸ್ಪಿ ಅವರಿಗೆ ನೀಡಿ ಗೌರವಿಸಿದರು.