ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ನಡೆಸಿ ಈಗಾಗಲೇ ಸುಮಾರು 9-10 ವರ್ಷಗಳಾದ ಹಿನ್ನೆಲೆಯಲ್ಲಿ ಮತ್ತೆ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದ್ದಾರೆ.
ಇಂದ್ರಾಳಿ ರೈಲು ನಿಲ್ದಾಣದ ಹೊರವಲಯದ ಪಾದಚಾರಿ ಮಾರ್ಗದಲ್ಲಿ ಮಂಗಳವಾರ ನಸುಕಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಒಬ್ಬ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯ ಆಟೋ ಚಾಲಕರು ರಕ್ಷಿಸಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರ್ಕಳದ ಕೌಡೂರು ಗ್ರಾಮದ ರಂಗನಪಲ್ಕೆ ನಿವಾಸಿ ಕವಿತಾ ಕೃಪಾಲಿನಿ ಎಂಬ ಮಹಿಳೆಗೆ ಕಾರ್ಕಳದ ಅತ್ತೂರು, ದೂಪದಕಟ್ಟೆ ನಿವಾಸಿ ರಾಘವೇಂದ್ರ. ಎಸ್. ಎಂಬುವವರು ಪ್ರಧಾನ ಮಂತ್ರಿ ರೋಜ್ಗಾರ್ ಯೋಜನೆ (ಪಿಎಂಈಜಿಪಿ)ಅಡಿಯಲ್ಲಿ ಸಿಗುವ ಸಾಲದಿಂದ ಜೆರಾಕ್ಸ್ ಮಿಷನ್, ಲ್ಯಾಮಿನೇಷನ್ ಮಿಷನ್, ಲ್ಯಾಪ್ಟಾಪ್, ಹಾಗೂ ಇತರ ಪರಿಕರಗಳನ್ನು ಕೊಡಿಸುತ್ತೇನೆ ಎಂದು ನಂಬಿಸಿ 9.5 ಲಕ್ಷ ರೂಪಾಯಿ ವಂಚಿಸಿದ ಘಟನೆ ನಡೆದಿದೆ.
ಆರ್ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಬಲಿಯಾದ ಹೆಬ್ರಿ ಮೂಲದ ಪ್ರತಿಭಾವಂತ ವಿದ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಅವರ ಕುಟುಂಬಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಭೇಟಿ ನೀಡಿದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿಗಳ ಚೆಕ್ ಅನ್ನು ಚಿನ್ಮಯಿಯ ತಂದೆ ಕರುಣಾಕರ ಶೆಟ್ಟಿ ಅವರಿಗೆ ಮಂಗಳವಾರ ಹಸ್ತಾಂತರಿಸಲಾಯಿತು.
ದಿನಾಂಕ 4-06-2025 ರಂದು ಶ್ರೀ ವಾಸುಶೆಟ್ಟಿ ಮತ್ತು ಅವರ ಸಹೋದರ ಶ್ರೀ ಹರೀಶ್ ಶೆಟ್ಟಿ ನರಕೆ, ನೆಲ್ಲಿಕಟ್ಟೆ ಇವರು ಸ. ಕಿ. ಪ್ರಾ. ಶಾಲೆ ನೆಲ್ಲಿಕಟ್ಟೆ ಹಿರ್ಗಾನ ಇಲ್ಲಿನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸುವುದರ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹಿಸಿರುತ್ತಾರೆ.