ಮರವಂತೆ ಬೀಚ್ನಲ್ಲಿ ಪ್ರವಾಸಿಗರ ಸೆಲ್ಫಿ ಹುಚ್ಚಾಟ ಹಾಗೂ ಅಜಾಗ್ರತೆಯ ಪರಿಣಾಮವಾಗಿ ಐದು ಮಂದಿ ಸಮುದ್ರ ಪಾಲಾಗುವ ಹಂತಕ್ಕೆ ತಲುಪಿದ್ದರು. ಆದರೆ ಲೈಫ್ ಗಾರ್ಡ್ಗಳ ಸಮಯ ಪ್ರಜ್ಞೆ ಮತ್ತು ಸ್ಥಳೀಯರ ಸಹಕಾರದಿಂದ ಅವರನ್ನು ರಕ್ಷಿಸಲಾಯಿತು.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.
ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.