ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ (H.K.E. ಸೊಸೈಟಿ) ವಿದ್ಯಾರ್ಥಿನಿ ಕುಮಾರಿ ಅನುಪಮಾ ಹೊಳ್ಳ ಅವರು ಪ್ರಥಮ ವರ್ಷದ ಬಿ.ಎಡ್ (ವಿಜ್ಞಾನ ವಿಭಾಗ) ಪರೀಕ್ಷೆಯಲ್ಲಿ 8.75 ಎಸ್.ಜಿ.ಪಿ.ಎ. (SGPA) ಅಂಕಗಳನ್ನು ಪಡೆದು ಕಾಲೇಜಿಗೆ ಮೊದಲ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ.
ಹನಿ ಟ್ರ್ಯಾಪ್ ಮೂಲಕ ವ್ಯಕ್ತಿಯೊಬ್ಬರನ್ನು ಬಲೆಗೆ ಬೀಳಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಆರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ₹18 ಲಕ್ಷ ಮೌಲ್ಯದ ಕಾರನ್ನೂ ವಶಪಡಿಸಿಕೊಳ್ಳಲಾಗಿದೆ.
ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.