ಮಂಗಳೂರು ನಗರಕ್ಕೆ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 'ಪ್ರಧಾನಮಂತ್ರಿ ಇ-ಬಸ್ ಸೇವಾ' ಯೋಜನೆಯಡಿ 100 ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 300ಕ್ಕೂ ಹೆಚ್ಚು ಮಂದಿಯಿಂದ ಸುಮಾರು ₹4 ಕೋಟಿಗೂ ಅಧಿಕ ವಂಚನೆ ಮಾಡಿದ ಆರೋಪದಡಿ, ಇಬ್ಬರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.
ಕಾರು ಮತ್ತು ಸ್ಕೂಟರ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ, ಠಾಣೆಯಿಂದ ಕಾರನ್ನು ಬಿಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕದ್ರಿ ಟ್ರಾಫಿಕ್ ಠಾಣೆಯ ಹೆಡ್ಕಾನ್ಸ್ಟೇಬಲ್ ತಸ್ಲಿಂ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.
ಪ್ರೇಮ ವೈಫಲ್ಯದಿಂದ ಕುಪಿತಗೊಂಡ ಯುವಕನೊಬ್ಬ, ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಗೆ ಚಾಕುವಿನಿಂದ ಇರಿದು, ಆಕೆ ಮೃತಪಟ್ಟಳೆಂದು ತಪ್ಪಾಗಿ ಭಾವಿಸಿ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘೋರ ಘಟನೆ ಇಂದು ಬೆಳಿಗ್ಗೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿ ನಡೆದಿದೆ.
ದಶಕದಷ್ಟು ಹಳೆಯದಾದ ಮಗು ಮಾರಾಟ (ಮಾನವ ಕಳ್ಳಸಾಗಣೆ) ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಮೂವರು ಆರೋಪಿಗಳಿಗೆ 10 ವರ್ಷಗಳ ಕಠಿಣ ಸಜೆ ಮತ್ತು ತಲಾ 5,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.