ಮುದ್ರಾಡಿಯ ಹಿರಿಯ ವೈದ್ಯರು ಮತ್ತು ವಿದ್ಯಾಸಾಗರ ಎಜುಕೇಶನ್ ಟ್ರಸ್ಟಿನ ಖಜಾಂಚಿ ಡಾ. ಎಂ. ಎಸ್. ರಾವ್ ಅವರು ಆಗಸ್ಟ್ 29 ರಂದು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ನಡೆದ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಿ ಮಾತನಾಡಿದರು.
ಸಂತೋಷ ಪೂಜಾರಿ ನೆಕ್ಕಾರ್ ಬೆಟ್ಟುರವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಗೆ 1995-96 ನೆ ಸಾಲಿನ ವಿದ್ಯಾರ್ಥಿಗಳು ಕ್ರೀಡಾ ಪರಿಕರಗಳು ಸೇರಿ ಮೂಲಭೂತ ಸೌಲಭ್ಯಗಳಿಗೆ ಕೊಡಮಾಡಿದ 50,000 ರೂಗಳ ಚೆಕ್ ಮತ್ತು ಕ್ರೀಡಾ ಪರಿಕರಗಳ ಹಸ್ತಾಂತರ ಮಾಡಿದರು.
ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಸ್ನೇಹಲತಾ ಟಿ. ಜಿ. ಯವರು ಮುದ್ರಾಡಿಯ ಎಂ.ಎನ್. ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳನ್ನು ದೀಪಬೆಳಗಿ ಉದ್ಘಾಟಿಸಿದರು