ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಅತ್ಯಾಧುನಿಕ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲು ಜಪಾನ್ ನ ವಿಲ್ ಡಿಸೈನ್ ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಂಗವಾಗಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತಾಲೀಮ್ ತಂಡ ಹಾಗೂ ಸಿಒಪಿಇ-ಆದಿತ್ಯ ಬಿರ್ಲಾ ಗ್ರೂಪ್ ನ ಎಂಪವರ್ ಜಂಟಿಯಾಗಿ 'ಪ್ರತ್ಯಾಹಾರ್' ಎಂಬ 15 ನಿಮಿಷಗಳ ಕಾಲದ ಆತ್ಮಹತ್ಯೆ ತಡೆಗಟ್ಟುವಿಕೆಯ ಬಗೆಗಿನ ಬೀದಿ ನಾಟಕವನ್ನು ಸೆ.10 ರಂದು ಕಾಲೇಜಿನ ಆವರಣದಲ್ಲಿ ಏರ್ಪಡಿಸಿತು.
ದಿನಾಂಕ 10-09-2025 ರ ಬುಧವಾರದಂದು ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರೆಡು ದಿನಗಳ ಕಾಲ ನಡೆಯಲಿರುವ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.
04-09-2025 ರಂದು ಡಾ.ಎನ್.ಎಸ್ .ಎ.ಎಮ್ ಪ್ರಥಮದರ್ಜೆ ಕಾಲೇಜು, ನಿಟ್ಟೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಐಕ್ಯೂಎಸಿ ಕೋಶವು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಆಶ್ರಯದಲ್ಲಿ ರಾಣಿ ಅಬ್ಬಕ್ಕ @500 ಪ್ರೇರಣದಾಯಿ ಉಪನ್ಯಾಸ ಮಾಲಿಕೆಯ 41 ನೇ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು.